ಸಾಂದರ್ಭಿಕ ಚಿತ್ರ 
ರಾಜ್ಯ

ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಅಧಿಕಾರಿ: ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ; ಚೇಸ್ ಮಾಡಿ ವಶಕ್ಕೆ!

ಮಹಾಂತೇಗೌಡ ಬಿ. ಕಡಬಾಳು ಎಂಬವರೇ ಬಂಧಿತ ಆಹಾರ ನಿರೀಕ್ಷಕ ಎಂದು ತಿಳಿದು ಬಂದಿದೆ. ಮಹಾಂತೇಗೌಡ, ಇತ್ತೀಚೆಗೆ ರಂಗಧಾಮಯ್ಯ ಎಂಬುವವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗಾಗಿ 1ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಲು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ವಾಹನ ಹತ್ತಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕನನ್ನು ಶುಕ್ರವಾರ ಬಂಧಿಸಲಾಗಿದೆ.

ಮಹಾಂತೇಗೌಡ ಬಿ. ಕಡಬಾಳು ಎಂಬವರೇ ಬಂಧಿತ ಆಹಾರ ನಿರೀಕ್ಷಕ ಎಂದು ತಿಳಿದುಬಂದಿದೆ. ಮಹಾಂತೇಗೌಡ, ಇತ್ತೀಚೆಗೆ ರಂಗಧಾಮಯ್ಯ ಎಂಬುವವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗಾಗಿ 1 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 12,000 ಮುಂಗಡವಾಗಿ ಪಡೆದಿದ್ದರು. ಈ ಬಗ್ಗೆ ರಂಗಧಾಮಯ್ಯ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು.

ಶುಕ್ರವಾರ ನಗರದ ಸ್ಥಳವೊಂದರಲ್ಲಿ ರಂಗಧಾಮಯ್ಯ ಅವರಿಂದ 43,000 ಲಂಚದ‌ ಹಣ ಪಡೆದುಕೊಂಡಾಗ ಲೋಕಾಯುಕ್ತ ಪೊಲೀಸರು ಬಂಧನಕ್ಕೆ‌ ಕಾರ್ಯಾಚರಣೆ ನಡೆಸಿದ್ದರು. ಮಹಾಂತೇಗೌಡ ಕಾರು ಏರಿಸಿ ಪರಾರಿಯಾಗಲು ಯತ್ನಿಸಿದ್ದರು.

15 ಕಿ.ಮೀ. ವರೆಗೂ ಆರೋಪಿಯನ್ನು ಬೆನ್ನಟ್ಟಿ ಹೋದ ಲೋಕಾಯುಕ್ತ ಪೊಲೀಸರು, ನೆಲಮಂಗಲ‌ ಸೊಂಡೆಕೊಪ್ಪ‌ ರಸ್ತೆಯಲ್ಲಿ ಆರೋಪಿಯ ಕಾರನ್ನು ಸುತ್ತುವರಿದರು. ಆಗ ಸಾಕ್ಷಿಗಳಾಗಿ ಬಂದಿದ್ದ ಸರ್ಕಾರಿ ನೌಕರರು ಮತ್ತು ಲೋಕಾಯುಕ್ತ ಪೊಲೀಸರ ಮೇಲೆ ವಾಹನ ಹತ್ತಿಸಿ ಪರಾರಿಯಾಗಲು ಮಹಾಂತೇಗೌಡ ಯತ್ನಿಸಿದರು. ನಂತರ ಆತನನ್ನು ಹಿಂಬಾಲಿಸಿ ಬಂಧಿಸಲಾಗಿದೆ.

ಮಹಾಂತೇಗೌಡ ಅವರನ್ನು ಲಂಚದ ಹಣದ ಸಮೇತ ಬಂಧಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ‌ ದಾಖಲಿಸಿರುವ ಪ್ರಕರಣದ ಜತೆಯಲ್ಲಿ ಸರ್ಕಾರಿ‌ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ವಾಹನ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ‌‌ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ‌ ಎಂದು‌ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT