ಸಚಿವ ಮಂಕಾಳ ಎಸ್ ವೈದ್ಯ 
ರಾಜ್ಯ

ಸಿಆರ್‌ಝಡ್ ಸಮಸ್ಯೆಗಳಿಂದ ಕಡಲ ಯೋಜನೆಗಳು ಸ್ಥಗಿತಗೊಂಡಿವೆ: ಸಚಿವ ಮಂಕಾಳ್ ಸುಬ್ಬ ವೈದ್ಯ

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ.

ಮಂಗಳೂರು: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ.

ಶುಕ್ರವಾರ ಇಲ್ಲಿ ಕಾನ್ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿಯ (ಸಿಐಐ) ರಾಜ್ಯ ವಿಭಾಗ ಆಯೋಜಿಸಿದ್ದ ಮೊದಲ ಕರ್ನಾಟಕ ಬಂದರು ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಹೂಡಿಕೆದಾರರು ಕಡಲ ಯೋಜನೆಗಳಿಗೆ ಹಣ ನೀಡಲು ಮುಂದೆ ಬಂದಿದ್ದಾರೆ. ಆದರೆ, ಕೇಂದ್ರವು ನಿಯಮಗಳಲ್ಲಿ ಕೆಲವು ಸಡಿಲಿಕೆಗಳನ್ನು ಘೋಷಿಸಿದ್ದರೂ, ಸಿಆರ್‌ಝಡ್ ಕ್ಲಿಯರೆನ್ಸ್ ಪಡೆಯಲು ಅಡೆತಡೆಗಳಿವೆ ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಮಾವಿನಕುರ್ವೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಬಂದರನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ಹೇಳಿದರು.

ಕಾರವಾರದಲ್ಲಿ ಮಿನಿ ಫ್ಲೋಟಿಂಗ್ ಜೆಟ್ಟಿ ಶೀಘ್ರದಲ್ಲೇ ಬರಲಿದ್ದು, ಮಂಗಳೂರಿನಲ್ಲಿ ಮತ್ತೊಂದು ಫ್ಲೋಟಿಂಗ್ ಜೆಟ್ಟಿಯ ಪ್ರಸ್ತಾವನೆ ಬಾಕಿ ಇದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT