ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನದಲ್ಲಿ ಉತ್ತರ ಪ್ರದೇಶ ಮೂಲದ ಯುವಕರಿಬ್ಬರ ನಿಗೂಢ ಸಾವು!

ಹಾಸನದ ಹನುಮಂತಪುರ ಗ್ರಾಮದಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಹಾಸನ: ಹಾಸನದ ಹನುಮಂತಪುರ ಗ್ರಾಮದಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಮೃತರನ್ನು 24 ವರ್ಷದ ನವಾಬ್​ ಮತ್ತು 30 ವರ್ಷದ ರಾಮ ಸಂಜೀವನ್​ ಎಂದು ಗುರುತಿಸಲಾಗಿದ್ದು ಇಬ್ಬರ ಮೃತದೇಹ ಕೊಠಡಿಯಲ್ಲಿ ಪತ್ತೆಯಾಗಿವೆ. 

ಉತ್ತರ ಪ್ರದೇಶದ ನಯನ್​ಪುರ ಗ್ರಾಮದವರಾದ ಯುವಕರು ಉದ್ಯೋಗ ಅರಸಿ ಹಾಸನ ತಾಲೂಕಿನ ಹನುಮಂತಪುರ ಗ್ರಾಮಕ್ಕೆ ಬಂದಿದ್ದು ಹನುಮಂತಪುರ ಗ್ರಾಮದ ಮಹೇಶ್ ಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜ್ವರ ಬಂದಿದ್ದರಿಂದ ಔಷಧಿ ಸೇವಿಸಿ ಮಲಗಿದ್ದ ಅವರು ಮತ್ತೆ ಎದ್ದೇಳಲಿಲ್ಲ.

ಒಂದು ದಿನ ಕಳೆದರು ಮನೆಯ ಬಾಗಿಲು ತೆರೆಯದಿದ್ದರಿಂದ ಮನೆಯ ಮಾಲೀಕ ಮಹೇಶ್ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಯುವಕರು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. 

ಪ್ರಕರಣ ದಾಖಲಿಸಿಕೊಂಡಿರುವ ಹಾಸನ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT