ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!

ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು:ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ನಾಗರತ್ನಂ ಮತ್ತು ಚಿಕ್ಕತಾಯಮ್ಮ ದಂಪತಿ ಕಾಮಾಕ್ಷಿಪಾಳ್ಯ ಕರೆ ಕಲ್ಲು ಏರಿಯಾದಲ್ಲಿ ವಾಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ 29 ವರ್ಷಗಳಾಗಿವೆ.‌ . ಆರೋಪಿ ನಾಗರತ್ನಂಗೆ ಕುಡಿತದ ಚಟ ಹೆಚ್ಚಾಗಿತ್ತು. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ. ನಾಗರತ್ನಂ ಶಾಲೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್​ಆಗಿ ಕೆಲಸ ಮಾಡುತ್ತಿದ್ದ.

ಪತ್ನಿಯೂ ಅದೇ ಶಾಲೆಯಲ್ಲಿ ಕೆಲಸ ಮಾಡಿ ಬಂದ ಹಣದಲ್ಲಿ ಮನೆ ನಡೆಸುತ್ತಿದ್ದರು.‌ ನಿನ್ನೆ ರಾತ್ರಿ ಕುಡಿದು ಬಂದ ಪತಿ, ಪತ್ನಿಯೊಂದಿಗೆ ಜಗಳಕ್ಕೆ ನಿಂತಿದ್ದ. ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಸುತ್ತಿಗೆಯಿಂದ ಆಕೆಯ ತಲೆ‌ ಮೇಲೆ ಹಲ್ಲೆ‌ ಮಾಡಿದ್ದಾನೆ.  ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಮರಳಿದ ಆರೋಪಿ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಈ ವೇಳೆ ಸಂಬಂಧಿಕರೊಬ್ಬರು ಪುತ್ರ ರಾಜುಗೆ ಕರೆ ಮಾಡಿ ತಿಳಿಸಿದ್ದಾರೆ, ರಾಜು ಮನೆಗೆ ಮರಳು ವೇಳೆಗೆ ಆಕೆಯ ತಾಯಿ ಸಾವನ್ನಪ್ಪಿದ್ದರು.

ನಂತರ ಪತಿ ಪರಾರಿಯಾಗಿದ್ದ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT