ಪ್ರಾತಿನಿಧಿಕ ಚಿತ್ರ 
ರಾಜ್ಯ

ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್‌ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ.

ಬೆಂಗಳೂರು: 50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್‌ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಜತೆಗೆ ಅವರ ಪರವಾಗಿ ಲಂಚ ಪಡೆದ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಬೆಂಗಳೂರಿನ ನಿವಾಸಿ ಮಂಜೇಗೌಡ ಎಂಬುವವರಿಂದ ಮಹೇಶ್ 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಮಹೇಶ್ ಈಗಾಗಲೇ 75 ಸಾವಿರ ರೂ. ಲಂಚವನ್ನು ನಗದು ರೂಪದಲ್ಲಿ ಪಡೆದಿದ್ದಾರೆ.

ಹೆಚ್ಚಿನ ಹಣ ನೀಡಲು ಇಚ್ಛಿಸದ ಮಂಜೇಗೌಡ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು. ದೂರಿನ ಆಧಾರದ ಮೇಲೆ ಭಾನುವಾರ ಬೆಂಗಳೂರಿನ ಪಾರ್ಟಿ ಹಾಲ್‌ನಲ್ಲಿ ಬಲೆ ಬೀಸಲಾಗಿದೆ. 

ಮಹೇಶ್ ಪರವಾಗಿ ಉತ್ತರಹಳ್ಳಿಯ ರಮೇಶ್ ದೂರುದಾರರಿಂದ 50,000 ರೂ.ಗಳನ್ನು ಪಡೆದಿದ್ದು, ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT