ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಆನ್‌ಲೈನ್ ವಂಚನೆಯಿಂದ 1.16 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಅಡುಗೆ ಉದ್ಯಮಕ್ಕೆ ಬೇಕಾದ ಸಲಕರಣೆಗಳನ್ನು ಕಳುಹಿಸುವ ನೆಪದಲ್ಲಿ ಆನ್‌ಲೈನ್ ವಂಚಕನೊಬ್ಬ ವ್ಯಕ್ತಿಯೊಬ್ಬನಿಂದ 1.16 ಲಕ್ಷ ರೂಪಾಯಿ ದೋಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಅಡುಗೆ ಉದ್ಯಮಕ್ಕೆ ಬೇಕಾದ ಸಲಕರಣೆಗಳನ್ನು ಕಳುಹಿಸುವ ನೆಪದಲ್ಲಿ ಆನ್‌ಲೈನ್ ವಂಚಕನೊಬ್ಬ ವ್ಯಕ್ತಿಯೊಬ್ಬನಿಂದ 1.16 ಲಕ್ಷ ರೂಪಾಯಿ ದೋಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರುದಾರರು ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಸಲಕರಣೆಗಳನ್ನು ನೋಡಿದ್ದರು. ನಂತರ, ಸಂತ್ರಸ್ತನೊಂದಿಗೆ ಆಪಾದಿತ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರು ಚಾಟ್ ಮಾಡಿದ್ದರು.

ಅಪರಿಚಿತರು, ಸಂತ್ರಸ್ತರಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವ ಭರವಸೆ ನೀಡಿದ್ದರು. ನಂತರ, ಅವರು ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು ಕಳುಹಿಸಿದರು ಮತ್ತು ದೂರುದಾರರಿಗೆ ತಮ್ಮ ವಿವರಗಳನ್ನು ನೀಡುವಂತೆ ಕೇಳಿದ್ದಾರೆ.

ವ್ಯಕ್ತಿ ತನ್ನ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿವರಗಳನ್ನು ನೀಡಿದ ನಂತರ, ಆತನ ಖಾತೆಯಿಂದ 1.16 ಲಕ್ಷ ರೂಪಾಯಿಗಳನ್ನು ಹಂತಹಂತವಾಗಿ ದೋಚಿದ್ದಾರೆ.

ಈ ಸಂಬಂಧ ಇಲ್ಲಿನ ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT