ಸಾಂದರ್ಭಿಕ ಚಿತ್ರ 
ರಾಜ್ಯ

ಪರಸ್ಪರ ಸಂಘರ್ಷ: ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವು

ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮಂಗಳೂರು: ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಕೆಲಸದ ವಿಚಾರವಾಗಿ ಸಹ ಕಾರ್ಮಿಕನ ಜೊತೆ ಜಗಳ ನಡೆದು ಕಟ್ಟಡ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ ಒಡಿಶಾ ಮೂಲದ ಗಣೇಶ್ (50 ವರ್ಷ) ಕೊಲೆಯಾಗಿದ್ದು, ಈತ ಕಟಪಾಡಿ-ಶಿರ್ವ ರಸ್ತೆಯ ಬಳಿ ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದರು. ಸೋಮವಾರ ರಾತ್ರಿ ಕೆಲಸ ಸಂಬಂಧಿತ ವಿಚಾರದಲ್ಲಿ ಇಬ್ಬರು ಕಾರ್ಮಿಕರು ಜಗಳ ಮಾಡಿಕೊಂಡಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಸಹ ಕಾರ್ಮಿಕರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಕಾರ್ಮಿಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!