ಸಂಗ್ರಹ ಚಿತ್ರ 
ರಾಜ್ಯ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.

ಈ ಬಗ್ಗೆ ಸೂಚನಾ ಪತ್ರದಲ್ಲಿ ಮಾಹಿತಿ ನೀಡುವಂತೆ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT