ಬಸ್ ಚಲಾಯಿಸಿದ ಎಸಿಪಿ ರಾಮಚಂದ್ರಪ್ಪ 
ರಾಜ್ಯ

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್: ಚಾಲಕನನ್ನು ಆಸ್ಪತ್ರೆಗೆ ಸೇರಿಸಿ, ಬಸ್ ಚಲಾಯಿಸಿದ ಎಸಿಪಿ; ಪ್ರಶಂಸೆಗಳ ಮಹಾಪೂರ!

ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ‌ ಸ್ಥಳಕ್ಕೆ‌ ತಲುಪಿಸಿದ್ದಾರೆ.

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ‌ ಸ್ಥಳಕ್ಕೆ‌ ತಲುಪಿಸಿದ್ದಾರೆ.

ಸೋಮವಾರ ಶಿವಾಜಿನಗರ-ಕಾಡುಗೋಡಿ‌ ಮಾರ್ಗವಾಗಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಚಾಲಕ ಮಾರ್ಗ ಮಧ್ಯದಲ್ಲಿಯೇ ಅಸ್ವಸ್ಥಗೊಂಡ ಪರಿಣಾಮ ಬಸ್‌ ಚಾಲನೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಚಾಲಕ ತಲುಪಿದ್ದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್​ ನಿಲ್ಲಿಸಿದ್ದ. ಎರಡು ದಿನಗಳ ವಿರೋಧ ಪಕ್ಷಗಳ ನಾಯಕರ ಸಭೆ ಹಿನ್ನೆಲೆ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ಪೋರ್ಟ್​ ರಸ್ತೆಯಲ್ಲಿ ಎಸಿಪಿ ರಾಮಚಂದ್ರಪ್ಪ ಅವರು ಭದ್ರತೆಗೆ ನಿಯೋಜನೆಗೊಂಡಿದ್ದರು.

ಈ ವೇಳೆ ರಸ್ತೆ ಮಧ್ಯ ನಿಂತಿದ್ದ ಬಿಎಂಟಿಸಿ ಬಸ್​ ಗಮನಿಸಿದ ರಾಮಚಂದ್ರಪ್ಪ, ಚಾಲಕನನ್ನು ಆಂಬ್ಯುಲೆನ್ಸ್‌ನಲ್ಲಿ‌ ಆಸ್ಪತ್ರೆಗೆ ಕಳುಹಿಸಿ, ಬಳಿಕ ಬಸ್ ಅನ್ನು ಸುಮಾರು ಒಂದು ಕಿ.ಮೀ ದೂರದ ಬಸ್​ ನಿಲ್ದಾಣದವರೆಗೆ ಸ್ವತಃ ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಸಿಪಿ ರಾಮಚಂದ್ರಪ್ಪ ಅವರು ಬಸ್ ಚಲಾಯಿಸುವ ವೀಡಿಯೊ ಮಾಡಿದ್ದಾರೆ. ನಂತರ ಅದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ, ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊವನ್ನು ಹಂಚಿಕೊಂಡಿರುವ ಹಲವರು, ‘ತುರ್ತು ಸಂದರ್ಭದಲ್ಲಿ ಚಾಲಕನನ್ನು ಆಸ್ಪತ್ರೆಗೆ ಸೇರಿಸಿರುವ ರಾಮಚಂದ್ರಪ್ಪ ಅವರು ಇತರೆ ಅಧಿಕಾರಿಗಳಿಗೆ ಮಾದರಿ’ ಎಂದು ಹೊಗಳಿದ್ದಾರೆ.

ಬಿಎಂಟಿಸಿ ಚಾಲಕ ಗೋಪಿ ಎಂದು ಗುರುತಿಸಲಾಗಿದ್ದು, ‘330’ ಮಾರ್ಗದಲ್ಲಿ ಕಾಡುಗೋಡಿ ಮತ್ತು ಶಿವಾಜಿನಗರ ನಡುವೆ ಬಸ್ ಓಡಿಸುತ್ತಿದ್ದಾಗ, ಮಧ್ಯಾಹ್ನ 12 ರ ಸುಮಾರಿಗೆ ಕಮಾಂಡ್ ಆಸ್ಪತ್ರೆ ಬಳಿ ಅಸ್ವಸ್ಥರಾಗಿದ್ದರು. ಸದ್ಯ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ನೋಡಿಕೊಳ್ಳಲು ಮತ್ತು ಅವರ ಚಿಕಿತ್ಸೆಯ ಮೇಲ್ವಿಚಾರಣೆಗೆ ಸಂಬಂಧಪಟ್ಟ ಬಿಎಂಟಿಸಿ ಡಿಪೋ ಮ್ಯಾನೇಜರ್ ಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT