ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ, ಸಿಎಂ ಶ್ಲಾಘನೆ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರವಾಗಿ ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.‌ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರವಾಗಿ ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.‌ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಉಗ್ರ ಬಂಧನ ಹಾಗೂ ಕಾರ್ಯಾಚರಣೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಬಂಧಿತರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಂತರ ಜಾಮೀನು ಮೇಲೆ ಹೊರಗೆ ಬಂದಿದ್ದರು. ನಂತರ ದೇಶದ್ರೋಹಿ ಸಂಘಟನೆಗಳ‌ ಸಂಪರ್ಕಕ್ಕೆ ಬಂದಿದ್ದಾರೆಂದು ಹೇಳಿದರು.

ಬಂಧಿಕರು ಕರ್ನಾಟಕ ಹಾಗೂ ಇತರೆಡೆಗಳಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಿದ್ದರು. ಶಂಕಿತರ ಸಂಭವನೀಯ ಉಗ್ರ ಚಟುವಟಿಕೆಗಳನ್ನು ಸಿಸಿಬಿ ಪೊಲೀಸರು ತಡೆದು ಬಂಧಿಸಿದ್ದಾರೆ. ಈ ಶಂಕಿತರು ಯಾವ ಉಗ್ರ ಚಟುವಟಿಕೆಗೆ ಉದ್ದೇಶಿಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ತಿಳಿಸಿದರು.

ಈ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT