ಶಂಕಿತ ಉಗ್ರರು 
ರಾಜ್ಯ

ಬೆಂಗಳೂರು: ಬಂಧಿತ ಶಂಕಿತ ಉಗ್ರರಿಂದ 4 ಗ್ರೆನೇಡ್ ಗಳು ವಶಕ್ಕೆ

ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಂಗ 4 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಂಗ 4 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬಂಧಿತ ಶಂಕಿತ ಭಯೋತ್ಪಾದಕನೊಬ್ಬನಿಂದ ನಾಲ್ಕು ಗ್ರೆನೇಡ್ ಗಳನ್ನು ಕೇಂದ್ರ ಅಪರಾಧ ವಿಭಾಗದ ಶೋಧಕರು ಪತ್ತೆ ಮಾಡಿದ್ದಾರೆ. ಜಾಹಿದ್ ತಬ್ರೇಜ್ (25) ಎಂಬ ಬಂಧಿತ ಶಂಕಿತ ಉಗ್ರ ತನ್ನ ಕೊಡಿಗೇಹಳ್ಳಿಯ ನಿವಾಸದಲ್ಲಿ ಈ ಗ್ರೆನೇಡ್‌ಗಳನ್ನು ಇಟ್ಟುಕೊಂಡಿದ್ದ. ತಲೆಮರೆಸಿಕೊಂಡಿರುವ ಮತ್ತು ವಿದೇಶದಲ್ಲಿ ನೆಲೆಸಿರುವ ಜುನೆದ್‌ನಿಂದ ಯಾರೋ ಒಬ್ಬರ ಮೂಲಕ ಅವುಗಳನ್ನು ಪಡೆದುಕೊಂಡಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಡಾ.ಶರಣಪ್ಪ ಎಸ್‌ಡಿ ಸುದ್ದಿಗಾರರಿಗೆ ತಿಳಿಸಿದರು.

ಆರೋಪಿಯು ತನ್ನ ಮನೆಯಲ್ಲಿ ಮರಳಿನ ಚೀಲದಲ್ಲಿ ಈ ಗ್ರೆನೇಡ್‌ಗಳನ್ನು ಅಡಗಿಸಿಟ್ಟಿದ್ದ. ಈ ಗ್ರೆನೇಡ್‌ಗಳು ಜೀವಂತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇನ್ನು ಮಂಗಳವಾರ ಬಂಧಿಸಲಾದ ಐವರು ಭಯೋತ್ಪಾದಕ ಶಂಕಿತರಲ್ಲಿ ಜಾಹಿದ್ ಕೂಡ ಸೇರಿದ್ದಾನೆ. ಈತ 2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಲಷ್ಕರ್-ಎ-ತೊಯ್ಬಾ ಕಾರ್ಯಕರ್ತ ಟಿ ನಾಸಿರ್ ಜತೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಬಂಧಿತ ಶಂಕಿತರಿಂದ ಏಳು ಪಿಸ್ತೂಲ್‌ಗಳು, 45 ಲೈವ್ ಕಾರ್ಟ್ರಿಡ್ಜ್‌ಗಳು ಮತ್ತು ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಬಂಧಿತ ಶಂಕಿತ ಉಗ್ರರೆಲ್ಲೂ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸರಣಿ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು ಎಂದು  ಪೊಲೀಸರು ತಿಳಿಸಿದ್ದಾರೆ.

ಈ ಶಂಕಿತರನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

Andaman Express: 110 ರೂ ದರ ಊಟಕ್ಕೆ 140 ರೂ.. : ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral

'ಕಾಲಿಗೆ ಪೆಟ್ಟಾಗಿದೆ.. ಪ್ಲೀಸ್ ಚಿಕಿತ್ಸೆ ಕೊಡಿ': ಆಸ್ಪತ್ರೆಗೆ ಬಂದು ಚಿಕಿತ್ಸೆ ಕೇಳಿ ಪಡೆದ ಬೀದಿ ನಾಯಿ, Video Viral

ಅಂಬಾ ದೇವಿಯ ದರ್ಶನ ಆಗಿದ್ದು ನನ್ನ ಪುಣ್ಯ: ಸಿಎಂ ಸಿದ್ದರಾಮಯ್ಯ

SCROLL FOR NEXT