ಒನ್ ವೇಯಲ್ಲಿ ಸಾಗುತ್ತಿರುವ ಕೆಎಸ್ಆರ್'ಟಿಸಿ ಬಸ್. 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ವಿರುದ್ಧ ದಿಕ್ಕಿನಲ್ಲಿ ಬಂದು ಕೆಎಸ್ಆರ್'ಟಿಸಿ ಬಸ್ ಚಾಲಕ ಹುಚ್ಚಾಟ, ಕ್ರಮಕ್ಕೆ ನೆಟ್ಟಿಗರ ಆಗ್ರಹ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಕೆಎಸ್​ಆರ್​ಟಿಸಿ ಬಸ್ ಚಾಲಕನೊಬ್ಬ ಬಸ್ ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟಲು ಪೊಲೀಸರು ನಾನಾ ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಕೆಎಸ್​ಆರ್​ಟಿಸಿ ಬಸ್ ಚಾಲಕನೊಬ್ಬ ಬಸ್ ನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಬಿಡದಿಯ ಶೇಷಗಿರಿ ಟೋಲ್ ಬಳಿ ಕೆಎ–10, ಎಫ್– 0492 ನಂಬರ್‌ನ ಕೆಎಸ್​ಆರ್​ಟಿಸಿ ಬಸ್ ಒನ್ ವೇನಲ್ಲಿ ಸಂಚರಿಸಿದೆ. 2 ಕಿ.ಮಿ ದೂರದ ವರೆಗೂ ಚಾಲಕ ಡೇಂಜರ್ ಡ್ರೈವ್ ಮಾಡಿದ್ದು, ಆತಂಕ ಸೃಷ್ಟಿದ್ದಾನೆ. ​

ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

ವಿಡಿಯೋವನ್ನು ಅಭಿಷೇಕ್ ಎಂಬುವವರು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ನಿಯಮಗಳ ಉಲ್ಲಂಘಿಸಲು ಸರಕಾರಿ ವಾಹನಗಳಿಗೆ ಅನುಮತಿಸಲಾಗಿದೆಯೇ? ನಂತರ ಜನರು ಎಕ್ಸ್‌ಪ್ರೆಸ್‌ವೇಯನ್ನು ದೂಷಿಸುವಂತೆ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಜು.14ರಂದು ಬೆಳಿಗ್ಗೆ 10.40ರ ಸುಮಾರಿಗೆ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿತ್ತು. ಕೆಎಸ್ಆರ್'ಟಿಸಿ ಬಸ್ ವೊಂದು ವಿರುದ್ಧ ದಿಕ್ಕಿನಲ್ಲಿ ಬಂದ ಪರಿಣಾಮ ಅಪಘಾತ ಸಂಭವಿಸಿತ್ತು. ಘಟನೆ ಬಳಿಕ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿ, ಎಲ್ಲಾ ಸಿಬ್ಬಂದಿಗಳು ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿತ್ತು.

ಈ ನಡುವೆ ಘಟನೆ ಬಗ್ಗೆ ಗಮನ ಹರಿಸಿರುವ ರಾಮನಗರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದ ಪೊಲೀಸರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT