ಸಂಗ್ರಹ ಚಿತ್ರ 
ರಾಜ್ಯ

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ಬೆಂಗಳೂರು: ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ಕನ್ನಡ ಭಾಷಾ ಕಲಿಕೆ ಕಾಯಿದೆ-2015ರ ಪ್ರಕಾರ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ನಗರದ ಖಾಸಗಿ ಶಾಲೆಯೊಂದು 8ನೇ ತರಗತಿಯಿಂದ ಕನ್ನಡ ಕಲಿಕೆಯನ್ನು ಸ್ಥಗಿತಗೊಳಿಸಲು ಮುಂದಾಗಿತ್ತು.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರಿವು, ಕೂಡಲೇ ಸ್ಪಷ್ಟನೆ ನೀಡುವಂತೆ ಶಾಲೆಗೆ ನೋಟಿಸ್ ಜಾರಿ ಮಾಡಿದೆ.

ಕಾನೂನಿನ ಪ್ರಕಾರ ಕನ್ನಡ ಕಲಿಕೆಗೆ ಅವಕಾಶ ಕಲ್ಪಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಹಿಂದೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT