ಸಂಗ್ರಹ ಚಿತ್ರ 
ರಾಜ್ಯ

ಪ್ಯಾರಿಸ್-ಬೆಂಗಳೂರು ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ: ಟೆಕ್ಕಿ ಬಂಧನ

ಪ್ಯಾರಿಸ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಅಮೆರಿಕದ ಭಾರತೀಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್‌'ವೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಪ್ಯಾರಿಸ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಅಮೆರಿಕದ ಭಾರತೀಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್‌'ವೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಆಂಧ್ರ ಪ್ರದೇಶದ ರಾಜಮಂಡ್ರಿ ನಗರದ ವೆಂಕಟ್ ಮೋಹಿತ್ ಪಥಿಪತಿ (29) ಎಂಬ ಟೆಕ್ಕಿಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಜುಲೈ 15ರ ರಾತ್ರಿ ಈ ಘಟನೆ ನಡೆದಿದೆ. ಜುಲೈ 15ರ ಬೆಳಿಗ್ಗೆ 10.55ರ ಸುಮಾರಿಗೆ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಜುಲೈ 16 ರಂದು ಮಧ್ಯರಾತ್ರಿ 12.30 ಕ್ಕೆ ಕೆಐಎ ತಲುಪಿತ್ತು. ವೈಯಕ್ತಿಕ ಕೆಲಸಕ್ಕಾಗಿ ಬೆಂಗಳೂರಿಗೆ ಬರಲು ಪಥಿಪತಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆಯೇ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ವಿಮಾನದಲ್ಲಿದ್ದ ಸಹ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೀಡಾಗಿದ್ದರು.

ಈ ಕುರಿತು ವಿಮಾನದ ಸಿಬ್ಬಂದಿ ಸಲ್ಲಿಸಿದ್ದ ವರದಿ ಆಧಾರದ ಮೇರೆಗೆ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಥಿಪತಿ ಅವರು ವಿಮಾನದ ಎಡಭಾಗದಲ್ಲಿರುವ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಯತ್ನಿಸಿದ್ದರು ಎಂದು ಏರ್ ಫ್ರಾನ್ಸ್ ಇಂಡಿಯಾದ ಡ್ಯೂಟಿ ಮ್ಯಾನೇಜರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಿಮಾನ ಲ್ಯಾಂಡ್ ಆದ ಕೂಡಲೇ ದೂರು ಆಧರಿಸಿ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಲಾಯಿತು ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಅವರು ಹೇಳಿದ್ದಾರೆ.

ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ದುಡುಕಿನ ಅಥವಾ ನಿರ್ಲಕ್ಷ್ಯದ ಕೃತ್ಯ) ಮತ್ತು ವಿಮಾನ ನಿಯಮಗಳು 1937 ರ 29 (ವಿಮಾನ ಅಥವಾ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ವಿಮಾನದಲ್ಲಿ ಅಸಹಜ ನಡವಳಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧನದ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?