ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ

ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ.

ಮಂಗಳೂರು: ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಒಟ್ಟಿಗೆ ಬಂದಿದ್ದ ವೈದ್ಯಕೀಯ ಕಾಲೇಜಿನ ಇಬ್ಬರು ಹುಡುಗರು ಮತ್ತು ನಾಲ್ವರು ಹುಡುಗಿಯರನ್ನು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್(20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದು ವರದಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT