ಭಾರೀ ಮಳೆಯಿಂದಾಗಿ ಬೆಳೆ ಮುಳುಗಡೆಯಾಗಿರುವುದು. 
ರಾಜ್ಯ

ಭಾರೀ ಮಳೆ: ಬೆಳಗಾವಿ ಜಿಲ್ಲೆಯ 15 ಸೇತುವೆ ಮುಳುಗಡೆ

ಹಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಪರಿಣಾಮ ಜಿಲ್ಲೆ 15 ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದು ಜನಜೀವನದ ಮೇಲೆ ಪರಿಣಾಮ ಬೀರಿದೆ.

ಬೆಳಗಾವಿ: ಹಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಪರಿಣಾಮ ಜಿಲ್ಲೆ 15 ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದು ಜನಜೀವನದ ಮೇಲೆ ಪರಿಣಾಮ ಬೀರಿದೆ.

ಭಾರೀ ಮಳೆಯ ಪರಿಣಾಮ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಗೋಕಾಕ, ಹುಕ್ಕೇರಿ, ಖಾನಾಪುರ ತಾಲೂಕಿನಲ್ಲಿ 15 ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಸೇತುವೆಗಳ ಮೇಲಿನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಪೊಲೀಸ್ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ.

ಭೋಜ-ಕಾರದಗಾ, ಭೋಜವಾಡಿ-ನಿಪ್ಪಾಣಿ, ಮಲಿಕವಾಡ-ದತ್ತವಾಡ, ಬರವಾಡ-ಕುನ್ನೂರು, ಸಿದ್ನಾಳ್-ಅಕ್ಕೋಲ್, ಭೋಜ-ಕುನ್ನೂರು, ಭಿವಶಿ-ಜತ್ರತ್, ಜತ್ರತ್-ಭಿವಾಸಿ, ಮಂಜರಿ- ಬವನಸೌಂದತ್ತಿ, ಮಂಗಾವತಿ-ರಾಜಾಪುರ, ಅರ್ಜುನವಾಡಿ-ಕೊಚೇರಿ, ಅರ್ಜುನವಾಡಿ-ಕುರ್ಣಿ, ಕುರಣಿ-ಕೊಚಾರಿ, ಶೆಟ್ಟಿಹಳ್ಳಿ-ಮಾರನಹೋಲ್, ಖಾನಾಪುರ-ಹೆಮ್ಮಡಗಾ ಸೇತುವೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಂಚಾರವನ್ನು ಪರ್ಯಾಯ ರಸ್ತೆಗಳಲ್ಲಿ ಬದಲಾಯಿಸಲಾಗಿದೆ.

ಜಿಲ್ಲೆಯ ಕೃಷ್ಣಾ, ವೇದಗಂಗಾ, ದೂಧಗಂಗಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಒಳಹರಿವು ಹೆಚ್ಚಿದೆ.

ಜುಲೈ 22ರ ವೇಳೆಗೆ ಘಟಪ್ರಭಾ (ಹಿಡಕಲ್)ದ ಒಳಹರಿವು 25,765 ಕ್ಯೂಸೆಕ್, ಮಾರ್ಕಂಡೇಯ (ಶಿರೂರು ಅಣೆಕಟ್ಟು) 1454 ಕ್ಯೂಸೆಕ್, ಹಿಪ್ಪರಗಿ 91,200, ಮಲಪ್ರಭಾ 11,930, ಆಲಮಟ್ಟಿ 83,940, ರಾಜಾಪುರ, 72 ಕ್ಯುಸೆಕ್'ಗೆ ತಲುಪಿದೆ.

ವಾರದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ನಿಟ್ಟುಸಿರು ಬಿಡುವಂತಾಗಿದೆ. ಉತ್ತಮ ಮಳೆಯಿಂದ ಒಣಗುತ್ತಿದ್ದ ಭತ್ತದ ಬೆಳೆಗಳು ಪಾರಾಗಿ ರೈತರಲ್ಲಿ ಸಂತಸ ಮೂಡಿಸಿದೆ.
 
ಆದರೆ, ಬೆಳಗಾವಿ ನಗರದ ಹೊರವಲಯದ ಬಳ್ಳಾರಿ ನಾಲಾ ಹಾಗೂ ಮಾರ್ಕಂಡೇಯ ನದಿ ತೀರದಲ್ಲಿ ಭತ್ತ ಬಿತ್ತಿದ್ದ ಕೆಲ ರೈತರು ಬೆಳೆಗಳು ಮುಳುಗಡೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

WPL 2026: ಮೊದಲ ಪಂದ್ಯದಲ್ಲೇ ಸಿನಿಮಾ ತೋರಿಸಿದ RCB, 4 ಎಸೆತಗಳಲ್ಲಿ 20 ರನ್! ಹೀರೋ ಆದ Nadine de Klerk!

SCROLL FOR NEXT