ಡಿಕೆ.ಶಿವಕುಮಾರ್ 
ರಾಜ್ಯ

'ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನ: 70 ಸಾವಿರಕ್ಕೂ ಅಧಿಕ ಜನರಿಂದ ಸಲಹೆಗಳು ಬಂದಿವೆ; ಡಿಕೆ.ಶಿವಕುಮಾರ್

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಕುರಿತು ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಕಳೆದ ಒಂದು ತಿಂಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಕುರಿತು ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಕಳೆದ ಒಂದು ತಿಂಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ನಗರದ ಸಪ್ನ ಬುಕ್‌ ಹೌಸ್‌ ಪ್ರಸ್ತುತಪಡಿಸಿದ ದೊಡ್ಡೇಗೌಡ ಮತ್ತು ಆರ್‌ಎನ್‌ ಚಂದ್ರಶೇಖರ್‌ ರಚಿಸಿದ ‘ಬೆಂಗಳೂರು ಅಂದು ಮತ್ತು ಈಗ’ ಪುಸ್ತಕವನ್ನು ಶನಿವಾರ ಅನಾವರಣಗೊಳಿಸಿದ ಬಳಿಕ ಉಪ ಮುಖ್ಯಮಂತ್ರಿಗಳು ಮಾತನಾಡಿದಕ ಅವರು, ಬೆಂಗಳೂರು ನಗರ ಸಾಕಷ್ಟು ಬದಲಾಗಿದ್ದು, ನಗರ ಬೆಳೆದಂತೆ ಹೊಸ ಹೊಸ ಸವಾಲುಗಳು ಎದುರಾಗುತ್ತಿದೆ ಎಂದು ಹೇಳಿದರು.

2013ರ ನಂತರ ಈ ರಸ್ತೆಗಳ ಅಗಲೀಕರಣ ಕಷ್ಟವಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದೀಗ ಬೆಂಗಳೂರಿಗೆ ಹೊಸ ರೂಪ ಕೊಡಲು ಪ್ರಯತ್ನ ನಡೆಸಲಾಗುತ್ತಿದ್ದು, ಸವಾಲುಗಳು ಎದುರಾಗುತ್ತಿವೆ ಎಂದು ತಿಳಿಸಿದರು.

ಇದಕ್ಕಾಗಿ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಅಭಿಯಾನವನ್ನು ಆರಂಭಿಸಿತ್ತು. ಬೆಂಗಳೂರು ಪರಿವರ್ತನೆಗೆ ಸಲಹೆಗಳನ್ನು ಕೇಳಿದ್ದೆವುತ ಇದಕ್ಕಾಗಿ 70,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಮಕ್ಕಳಿಂದಲೂ ಅಭಿಪ್ರಾಯ ಪಡೆಯಲಾಗುತ್ತಿದೆ. ಈ ಎಲ್ಲಾ ಸಲಹೆಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತದೆ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಹಾಗೂ ದರ ಪರಿಷ್ಕರಣೆ ಕುರಿತು ಮಾತನಾಡಿ, ನಗರದಲ್ಲಿ ಶೇ.32ರಷ್ಟು ನೀರು ವ್ಯರ್ಥವಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ. 2014ರಿಂದಲೂ ನೀರಿನ ದರ ಪರಿಷ್ಕರಣೆ ಆಗಿರಲಿಲ್ಲ. ಇದರಿಂದಾಗಿ BWSSB ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಗರದಲ್ಲಿ ಇಂತಹ ಹಲವು ಆಂತರಿಕ ಸಮಸ್ಯೆಗಳಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT