ಪ್ರಿಯಾಂಕ್ ಖರ್ಗೆ 
ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಬಿಡುಗಡೆ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ  ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ  ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ರೂ. 6.14 ಕೋಟಿ ಹಣ ನೀಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. 

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲೆಗಳ ಸಿಇಒಗಳೊಂದಿಗೆ ಕಳೆದ ಒಂದು ತಿಂಗಳಲ್ಲಿ 2 ವಿಸ್ತ್ರತ ಸಭೆ ನಡೆಸಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನ (ಕಂಟಿನ್ಜೆನ್ಸಿ ಪ್ಲಾನ್) ತಯಾರಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಆ ವರದಿ ಪ್ರಕಾರ ಜಿಲ್ಲಾವಾರು ಎಷ್ಟು ತಾಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ವರದಿಯಲ್ಲಿ ನೀಡಿರುವಂತೆ ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ.  ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT