ಮಧು ಬಂಗಾರಪ್ಪ 
ರಾಜ್ಯ

ತಜ್ಞರ ಜೊತೆ ಮಾತುಕತೆ ನಂತರ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು: ಸಚಿವ ಮಧು ಬಂಗಾರಪ್ಪ

ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಮಂಗಳೂರು: ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಪಠ್ಯಕ್ರಮವನ್ನು ಬದಲಾಯಿಸದೆ ಹೊಸ ಪಠ್ಯಕ್ರಮದಲ್ಲಿ ಸಣ್ಣ ಬದಲಾವಣೆಗಳನ್ನು ತರಲಾಗಿದೆ ಎಂದರು.

ಪಠ್ಯಕ್ರಮವನ್ನು ಪರಿಶೀಲಿಸಿದ ನಂತರ, ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಗತ್ಯವಾದ ಪಾಠಗಳನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ಪಠ್ಯಗಳನ್ನು ಪರಿಷ್ಕರಿಸುವ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲೆಗಳಲ್ಲಿ ಶಿಕ್ಷಕರ ವರ್ಗಾವಣೆಯನ್ನು ಆನ್‌ಲೈನ್ ಪ್ರಕ್ರಿಯೆಯ ಮೂಲಕ ಮಾಡಲಾಗಿದೆ. ಈ ವಿಚಾರವಾಗಿ ನ್ಯಾಯಾಲಯವು ಅನುಮತಿ ನೀಡಿದ ನಂತರ 13,500 ಖಾಯಂ ಶಿಕ್ಷಕರನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದರು.

ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ಬಾರಿ ಚಿಕ್ಕಿ, ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಹೊಂದಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ಗೆ ಜನರು ನೀಡಿರುವ ಉತ್ತಮ ಜನಾದೇಶವನ್ನು ಬಳಸಿಕೊಂಡು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!