ಸಂಗ್ರಹ ಚಿತ್ರ 
ರಾಜ್ಯ

ಅಮಾನತುಗೊಂಡಿದ್ದ ಆರ್‌ಡಿಪಿಆರ್‌ ಅಧಿಕಾರಿಗೆ ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆ: ಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ!

ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸಚಿವ ಸತೀಶ್ ಜಾರಕಿಹೊಳಿ ಅವರು, ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆಯನ್ನು ನೀಡಿರುವುದು ಕಂಡು ಬಂದಿದೆ.

ತುಮಕೂರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್ ಆರ್ ಹರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.

ಯೋಜನೆಯ ಟೆಂಡರ್ ಕರೆಯಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ರಾಜ್ಯದ ಬೊಕ್ಕಸಕ್ಕೆ 2.78 ಕೋಟಿ ರೂ.ನಷ್ಟ ಉಂಟಾಗಿತ್ತು ಎಂದು ಹೇಳಲಾಗುತ್ತು. ಹೀಗಾಗಿ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆಯವರು ಅಮಾನತು ಮಾಡಿದ್ದರು.

ಆದರೆ, ಶುಕ್ರವಾರ ತುಮಕೂರಿನ ಪಿಡಬ್ಲ್ಯುಡಿಯಲ್ಲಿ ಮಹಿಳಾ ಅಧಿಕಾರಿ ಹೇಮಲತಾ ಆರ್ ಅವರ ಸ್ಥಾನಕ್ಕೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಎಸ್ ಆರ್ ಹರೀಶ್ ಅವರು ನೇಮಕ ಮಾಡಿರುವುದು ಕಂಡು ಬಂದಿದೆ.

ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ವರ್ಗಾವಣೆಯಾಗಿರುವುದರಿಂದ ಇದಕ್ಕೆ ಪ್ರಿಯಾಂಕ್ ಖರ್ಗೆಯವರ ಒಪ್ಪಿಗೆಯ ಅಗತ್ಯವಿರುವುದಿಲ್ಲ ಎಂದು ಮೂಲಗಳ ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT