ಸಂಗ್ರಹ ಚಿತ್ರ 
ರಾಜ್ಯ

ಅಮಾನತುಗೊಂಡಿದ್ದ ಆರ್‌ಡಿಪಿಆರ್‌ ಅಧಿಕಾರಿಗೆ ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆ: ಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ!

ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸಚಿವ ಸತೀಶ್ ಜಾರಕಿಹೊಳಿ ಅವರು, ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆಯನ್ನು ನೀಡಿರುವುದು ಕಂಡು ಬಂದಿದೆ.

ತುಮಕೂರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್ ಆರ್ ಹರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.

ಯೋಜನೆಯ ಟೆಂಡರ್ ಕರೆಯಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ರಾಜ್ಯದ ಬೊಕ್ಕಸಕ್ಕೆ 2.78 ಕೋಟಿ ರೂ.ನಷ್ಟ ಉಂಟಾಗಿತ್ತು ಎಂದು ಹೇಳಲಾಗುತ್ತು. ಹೀಗಾಗಿ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆಯವರು ಅಮಾನತು ಮಾಡಿದ್ದರು.

ಆದರೆ, ಶುಕ್ರವಾರ ತುಮಕೂರಿನ ಪಿಡಬ್ಲ್ಯುಡಿಯಲ್ಲಿ ಮಹಿಳಾ ಅಧಿಕಾರಿ ಹೇಮಲತಾ ಆರ್ ಅವರ ಸ್ಥಾನಕ್ಕೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಎಸ್ ಆರ್ ಹರೀಶ್ ಅವರು ನೇಮಕ ಮಾಡಿರುವುದು ಕಂಡು ಬಂದಿದೆ.

ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ವರ್ಗಾವಣೆಯಾಗಿರುವುದರಿಂದ ಇದಕ್ಕೆ ಪ್ರಿಯಾಂಕ್ ಖರ್ಗೆಯವರ ಒಪ್ಪಿಗೆಯ ಅಗತ್ಯವಿರುವುದಿಲ್ಲ ಎಂದು ಮೂಲಗಳ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ