ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ಚಿತ್ರ 
ರಾಜ್ಯ

ಕಲಬುರಗಿ: ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ಸಾವು

ಓವರ್‌ಹೆಡ್ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.

ಕಲಬುರಗಿ: ಓವರ್‌ಹೆಡ್ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.

ಆಟವಾಡಲು ಹೋಗಿದ್ದ ಮುೂವರು ಮಕ್ಕಳು ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರು ಬಾಲಕರು ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಭಾನುವಾರ ಬೆಳಿಗ್ಗೆ ತಿಳಿದುಬಂದಿತು ಎಂದು ಬಿಜೆಪಿ ಮುಖಂಡ ಚಂದು ಪಾಟೀಲ್ ತಿಳಿಸಿದ್ದಾರೆ. 

ಕಳೆದ ವರ್ಷದಿಂದ ಆರಂಭಗೊಂಡಿದ್ದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಕೆಲ ಸಮಸ್ಯೆಗಳಿಂದ ಆರು ತಿಂಗಳಿಂದ ಸ್ಥಗಿತಗೊಂಡಿತ್ತು. ಇದರ ಸುತ್ತ ಕಾಮಗಾರಿ ನಡೆಸುತ್ತಿರುವ ಸಂಸ್ಥೆ ಯಾವುದೇ ಬೇಲಿ ನಿರ್ಮಿಸದಿರುವುದು ಮಕ್ಕಳ ಸಾವಿಗೆ ಕಾರಣವಾಗಿದೆ. ಕಂಪನಿಯ ನಿರ್ಲಕ್ಷ್ಯದಿಂದ ನಾವು ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದೇವೆ ಎಂದು ಅವರು ಹೇಳಿದರು.

ಓವರ್ ಹೆಡ್ ವಾಟರ್ ಟ್ಯಾಂಕ್ ನಿರ್ಮಾಣಕ್ಕಾಗಿ ಕಾಮಗಾರಿಯನ್ನು ಕಳೆದ ಒಂದು ವರ್ಷದಿಂದ ಮಾಡುತ್ತಿದ್ದು, ಅದಕ್ಕಾಗಿ ಗುಂಡಿಯನ್ನು ನಿರ್ಮಾಣ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT