ಹೈಕೋರ್ಟ್ 
ರಾಜ್ಯ

ಹೈಕೋರ್ಟ್‌ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ

ಹೈಕೋರ್ಟ್‌ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.

ಬೆಂಗಳೂರು: ಹೈಕೋರ್ಟ್‌ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.

ಜುಲೈ 12 ರಂದು ಸಂಜೆ 7 ಗಂಟೆ ಸುಮಾರಿಗೆ ಪಿಆರ್‌ಒ ಕೆ ಮುರಳೀಧರ್ ಬೆದರಿಕೆ ಕರೆ ಸ್ವೀಕರಿಸಿದ್ದು, ಹೈಕೋರ್ಟ್ ನಿಂದ ನೀಡಲಾದ ಪಿಆರ್ ಒ ಅವರ ಅಧಿಕೃತ ಮೊಬೈಲ್ ನಂಬರ್ ಗೆ  ಮೇಸೆಜ್ ಬಂದಿದೆ. ಈ ಸಂಬಂಧ  ಜುಲೈ 14 ರಂದು ಸೆಂಟ್ರಲ್ ಸಿಇಎನ್ ಕ್ರೈಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆರು ನ್ಯಾಯಾಧೀಶರು ಮತ್ತು ಪಿಆರ್‌ಒಗೆ ಜೀವ ಬೆದರಿಕೆ ಹಾಕಿ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.  ಪಾಕಿಸ್ತಾನದಲ್ಲಿರುವ ಎಬಿಎಲ್ ಅಲೈಡ್ ಬ್ಯಾಂಕ್ ಲಿಮಿಟೆಡ್‌ಗೆ ರೂ. 50 ಲಕ್ಷ ಹಣವನ್ನು ಜಮಾ ಮಾಡಬೇಕೆಂದು ಪಿಆರ್ ಒ ವಾಟ್ಸಾಪ್ ಗೆ ಮೇಸೆಜ್ ಕಳುಹಿಸಲಾಗಿದೆ. ಅಲ್ಲದೇ  ಹಣ ಜಮಾ ಮಾಡಬೇಕಾದ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ಆರೋಪಿ ಕಳುಹಿಸಿದ್ದಾನೆ. 1929237-1677 ಸಂಖ್ಯೆಯಿಂದ ಸಂದೇಶವನ್ನು ಕಳುಹಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಎಫ್‌ಐಆರ್ ಪ್ರತಿಯಲ್ಲಿ ನ್ಯಾಯಾಧೀಶರಾದ ಮೊಹಮ್ಮದ್ ನವಾಜ್, ಎಚ್‌ಟಿ ನರೇಂದ್ರ ಪ್ರಸಾದ್, ಅಶೋಕ್ ಜಿ ನಿಜಗನ್ನವರ್, ಎಚ್‌ಪಿ ಸಂದೇಶ್, ಕೆ ನಟರಾಜನ್ ಮತ್ತು ವೀರಪ್ಪ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದಿದ್ದಲ್ಲಿ ‘ದುಬೈ ಗ್ಯಾಂಗ್’ ಮೂಲಕ ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಮೇರೆ ಆಪ್ಕೆ ಶೂಟರ್ ಹೈ' ಎಂಬ ಬೆದರಿಕೆ ಸಂದೇಶದೊಂದಿಗೆ ಐದು ಮೊಬೈಲ್ ನಂಬರ್ ಕೂಡಾ ಉಲ್ಲೇಖಿಸಲಾಗಿದೆ ಎಂದು  ಪಿಆರ್‌ಒ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸೈಬರ್ ಕ್ರೈಂ ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ಆರಂಭಿಸಿದ್ದು, ಯಾವ ನಂಬರ್‌ನಿಂದ ಸಂದೇಶ ಕಳುಹಿಸಲಾಗಿದೆ ಎಂಬ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಬೆದರಿಕೆ ಸಂದೇಶದಲ್ಲಿ ನಮೂದಿಸಲಾದ ಐದು ಮೊಬೈಲ್ ಫೋನ್ ಸಂಖ್ಯೆಗಳ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT