ಕರ್ನಾಟಕದಲ್ಲಿ ಭಾರಿ ಮಳೆ 
ರಾಜ್ಯ

ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆ

ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. 

ದಕ್ಷಿಣ ಕನ್ನಡ: ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. 

ತಗ್ಗು ಪ್ರದೇಶಗಳು ಮಳೆಯ ತೀವ್ರತೆಗೆ ಜಲಾವೃತಗೊಂಡಿವೆ. ನೇತ್ರಾವತಿ, ಫಲ್ಗುಣಿ ಹಾಗೂ ಹಲವು ತೊರೆಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದ್ದು ದಕ್ಷಿಣ ಕನ್ನಡದಲ್ಲಿ ನದಿ ದಡದಲ್ಲಿ ವಾಸಿಸುವ ಜನರಿಗೆ ಅಪಾಯತಂದೊಡ್ಡಿದೆ.

ಬಂಟ್ವಾಳ ತಾಲೂಕಿನಲ್ಲಿ ಕೆಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ವರ್ಗಾವಣೆ ಮಾಡಲಾಗಿದೆ.  ತಾಲ್ಲೂಕಿನಲ್ಲಿ ಅಡಿಕೆ ತೋಟಗಳೂ ಸಹ ಮುಳುಗಡೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ಇನ್ನು ಪ್ರಸಿದ್ಧ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದ್ದು, ದೇವಾಲಯಕ್ಕೆ ಬರುವ ಭಕ್ತರಿಗೆ ಕುಮಾರಧಾರ ನದಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT