ರಾಜ್ಯ

ಹಾಸನದಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ: ಲೋಕೋಪಯೋಗಿ ಇಲಾಖೆ ಎಇಇ ಅಧಿಕಾರಿ ಸಾವು!

Vishwanath S

ಹಾಸನ: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿದ್ದಾರೆ. 

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ಅಪಘಾತ ಸಂಭವಿಸಿದ್ದು ಮೃತನನ್ನು 58 ವರ್ಷದ ಮೋಹನ್‌ ಕುಮಾರ್ ಎಂದು ಗುರುತಿಸಲಾಗಿದೆ.

ಮೋಹನ್ ಕುಮಾರ್ ಸಕಲೇಶಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. 

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

SCROLL FOR NEXT