ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೇರೊಂದು ಯುವತಿ ಜೊತೆ ಸುತ್ತಾಟ; ಪ್ರಿಯಕರನಿಗೆ ಚಾಕು ಇರಿದ ಮಹಿಳೆ

ತನ್ನನ್ನು ಅವಾಯ್ಡ್ ಮಾಡಿ ಬೇರೊಬ್ಬ ಯುವತಿ ಜೊತೆ ಸುತ್ತಾಡುತ್ತಿದ್ದ ಪ್ರಿಯಕರನಿಗೆ ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ.

ಬೆಂಗಳೂರು: ತನ್ನನ್ನು ಅವಾಯ್ಡ್ ಮಾಡಿ ಬೇರೊಬ್ಬ ಯುವತಿ ಜೊತೆ ಸುತ್ತಾಡುತ್ತಿದ್ದ ಪ್ರಿಯಕರನಿಗೆ ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ.

ಆರೋಪಿಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಬಂಧಿಸಲಾಗಿದೆ. ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಅಸ್ಸಾಂ ಮೂಲದವರು.

ಜುಂಟಿ ತನ್ನ ಪತಿಯನ್ನು ತೊರೆದು ತನ್ನ 17 ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು ಮತ್ತು ಡೇಕೇರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜೋಗೇಶ್ ಎಂಬಾತನ ಪರಿಚಯವಾಗಿತ್ತು. ಅವರಿಬ್ಬರ ನಡುವೆ ಸಂಬಂಧವಿತ್ತು. ಆದಾಗ್ಯೂ, ಜೋಗೇಶ್ ಜುಂಟಿಯನ್ನುಅವಾಯ್ಡ್ ಮಾಡಲು ಫೋನ್ ಕರೆಗಳಿಗೆ ಉತ್ತರಿಸುತ್ತಿರಲಿಲ್ಲ,. ಆಕೆಯಿಂದ ಸ್ವಲ್ಪ ಹಣವನ್ನೂ ಪಡೆದಿದ್ದ ಎನ್ನಲಾಗಿದೆ.

ಜುಲೈ 21 ರಂದು, ಜುಂಟಿ ಈಜಿಪುರದಲ್ಲಿರುವ ಜೋಗೇಶ್ ಅವರ ಮನೆಗೆ ಆಕೆ ಹೋಗಿದ್ದಳು, ಅಲ್ಲಿ ಅವರಿಬ್ಬರೂ ಜಗಳವಾಡಿದರು, ನಂತರ ಅವಳು ಅವನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಳು. ಜೋಗೇಶ್‌ನ ಸ್ನೇಹಿತ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಕಂಡು ಆತನ ಮನೆಗೆ ತೆರಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜೋಗೇಶ್ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯಿಂದ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸದ ಕಾರಣ ಆಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಆಕೆಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT