ಸಾಂದರ್ಭಿಕ ಚಿತ್ರ 
ರಾಜ್ಯ

ಮಳೆಯ ಮಧ್ಯೆ ವಿಜಯಪುರದಲ್ಲಿ ಭೂಕಂಪನ: ಆತಂಕದಲ್ಲಿ ಜನತೆ

ನಿರಂತರ  ಜಿಟಿ ಜಿಟಿ ಮಳೆ ಮಧ್ಯೆಯೂ ವಿಜಯಪುರದಲ್ಲಿ ಭೂಕಂಪನದ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು(ಮಂಗಳವಾರ) ಭೂಮಿ ನಡುಗಿದ ಅನುಭವವಾಗಿದೆ.

ವಿಜಯಪುರ: ನಿರಂತರ  ಜಿಟಿ ಜಿಟಿ ಮಳೆ ಮಧ್ಯೆಯೂ ವಿಜಯಪುರದಲ್ಲಿ ಭೂಕಂಪನದ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು(ಮಂಗಳವಾರ) ಭೂಮಿ ನಡುಗಿದ ಅನುಭವವಾಗಿದೆ.

ಇಂದು ಬೆಳಿಗ್ಗೆ 9-55ಕ್ಕೆ ಭೂಕಂಪನದ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4ರ ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಭೂಕಂಪನಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗಾಗ ಸಂಭವಿಸುತ್ತಿದೆ. ಇದೀಗ ಜಿಟಿ ಜಿಟಿ ಮಳೆಗೆ ಮನೆಯ ಛಾವಣಿ ನೆನದಿವೆ. ಹೀಗಾಗಿ ಜನರು ಆತಂಕದಲ್ಲಿದ್ದಾರೆ.

ಭೂಕಂಪನದ 'ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್' ಪ್ರಕಾರ, ಗಮನಿಸಿದ ತೀವ್ರತೆಯು ತುಂಬಾ ಕಡಿಮೆಯಾಗಿದೆ. ಭೂಕಂಪದ ಕೇಂದ್ರದಿಂದ 15-20 ಕಿಮೀ ರೇಡಿಯಲ್ ದೂರದವರೆಗೂ ತೀವ್ರತೆ ಹರಡಿದೆ.

"ಈ ರೀತಿಯ ಭೂಕಂಪವು ಜನರಿಗೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ ಏಕೆಂದರೆ ತೀವ್ರತೆಯು ತುಂಬಾ ಕಡಿಮೆಯಾಗಿದೆ. ಪ್ರಮಾಣ ಮತ್ತು ತೀವ್ರತೆ ಕಡಿಮೆ ಇರುವುದರಿಂದ ಸಮುದಾಯ ಆತಂಕಪಡುವ ಅಗತ್ಯವಿಲ್ಲ ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT