ರಾಹುಲ್ ಗಾಂಧಿ 
ರಾಜ್ಯ

ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಪೂರ್ಣಗೊಳಿಸಿ: ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಕಂಪನಿಗಳ ಆಗ್ರಹ

ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳ ಮಾಲೀಕರು ಆಗ್ರಹಿಸಿದ್ದಾರೆ.

ಬಳ್ಳಾರಿ: ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳ ಮಾಲೀಕರು ಆಗ್ರಹಿಸಿದ್ದಾರೆ.

ಉದ್ಯಮಕ್ಕೆ ಸಹಾಯ ಮಾಡಲು ಮತ್ತು ಬಳ್ಳಾರಿ ಜಿಲ್ಲೆಯನ್ನು ದೇಶದಲ್ಲಿ ಜೀನ್ಸ್ ಕೈಗಾರಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲು 5,000 ಕೋಟಿ ವಿಶೇಷ ಪ್ಯಾಕೇಜ್ ನೀಡುವುದಾಗಿ ರಾಹುಲ್ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಹಲವು ತಿಂಗಳು ಕಳೆದಿದ್ದರೂ, ರಾಹುಲ್ ಗಾಂಧಿ ನೀಡಿದ್ದ ಭರವಸೆಗಳಿಗೆ ಯಾವುದೇ ಮನ್ನಣೆ ನೀಡದಿರುವುದು ಹಾಗೂ ಬಜೆಟ್‌ನಲ್ಲಿ ಪ್ರಸ್ತಾಪ ಮಾಡದಿರುವುದು ಕೈಗಾರಿಕೋದ್ಯಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಜೀನ್ಸ್‌ ಜವಳಿ ಪಾರ್ಕ್‌ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಬಜೆಟ್‌ನಲ್ಲಿ ಯಾವುದೇ ಹಣ ಮೀಸಲಿಟ್ಟಿಲ್ಲ ಎಂದು ಉದ್ಯಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿಯವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಂಪುಟ ಸಭೆಯಲ್ಲಿ ಹಣ ಹಂಚಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಹುಲ್ ಹೇಳಿದ್ದರು. ಈ ಹೇಳಿಕೆಯ ವೀಡಿಯೋ ಇದೀಗ ವೈರಲ್ ಆಗಿದೆ.

ಕಂಪನಿಗಳ ಮಾಲೀಕರಲ್ಲಿ ಒಬ್ಬರಾದ ಪೊಲಕ್ಸ್ ಮಲ್ಲಿಕಾರ್ಜುನ್ ಎಂಬುವವರು ಮಾತನಾಡಿ, 'ರಾಷ್ಟ್ರೀಯ ನಾಯಕರೊಬ್ಬರು ಭರವಸೆ ನೀಡಿದ್ದು, ಅದನ್ನು ಸರ್ಕಾರ ಗೌರವಿಸುತ್ತದೆ ಎಂಬ ವಿಶ್ವಾಸಗಳಿದ್ದವು. ಆದರೆ, ಏನೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT