ಬೆಂಗಳೂರಿನಲ್ಲಿ ಕಾಣಿಸಿಕೊಂಡ ನಿಗೂಢ ಬಾಗಿಲು 
ರಾಜ್ಯ

ಜಿಟಿಜಿಟಿ ಮಳೆ ನಡುವೆಯೇ ಬೆಂಗಳೂರಿನ ಆಗಸದಲ್ಲಿ 'ನಿಗೂಢ' ಪತ್ತೆ; ಸ್ವರ್ಗದ ಬಾಗಿಲು ಎಂದ ನೆಟ್ಟಿಗರು, ವಿಡಿಯೋ ವೈರಲ್

ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೇ ಸಿಲಿಕಾನ್ ಸಿಟಿಯ ಆಗಸದಲ್ಲಿ ಪ್ರಕೃತಿ ವಿಸ್ಮಯವೊಂದು ನಡೆದಿದ್ದು, ಆಗಸದಲ್ಲಿ 'ನಿಗೂಢ ಬಾಗಿಲು' (Mysterious Shadow In Bengaluru) ಪತ್ತೆಯಾಗುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೇ ಸಿಲಿಕಾನ್ ಸಿಟಿಯ ಆಗಸದಲ್ಲಿ ಪ್ರಕೃತಿ ವಿಸ್ಮಯವೊಂದು ನಡೆದಿದ್ದು, ಆಗಸದಲ್ಲಿ 'ನಿಗೂಢ ಬಾಗಿಲು' (Mysterious Shadow In Bengaluru) ಪತ್ತೆಯಾಗುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಹೌದು.. ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. ವಿಡಿಯೋದಲ್ಲಿ ಮಳೆಯ ನಡುವೆ ಸೂರ್ಯನ ಕಿರಣಗಳು ಮತ್ತು ಮೋಡಗಳ ಚಲನೆಯಿಂದಾಗಿ ಬಾಗಿಲಿನ ಆಕಾರದ ಆಕೃತಿ ರಚನೆಯಾಗಿದ್ದು ಇದು ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದ್ದು ಟ್ವಿಟರ್​ನಲ್ಲಿ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ.

ವಸೀಮ್ ಎಂಬ ಟ್ವಿಟರ್​ ಬಳಕೆದಾರರೊಬ್ಬರು ವಿಡಿಯೋವನ್ನು ಟ್ವೀಟ್ ಮಾಡಿದ್ದು 'ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು? ಎಂದು ಅವರು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವಿಡಿಯೋ ಟ್ವಿಟರ್​ನಲ್ಲಿ ಚರ್ಚೆಗೆ ಕಾರಣವಾಗಿದ್ದು ಜನರು ಆಶ್ಚರ್ಯ ಪಡುವಂತೆ ಮಾಡಿದೆ. ಕೇವಲರು ಇದು ಯಾವುದೋ ಎತ್ತರದ ಕಟ್ಟಡದ ಲೈಟ್​ನ ನೆರಳಿರಬಹುದು ಎಂದು ಊಹಿಸಿದರೆ ಇನ್ನೂ ಕೆಲವರು ಇದನ್ನು 'ಬ್ರೋಕನ್ ಸ್ಪೆಕ್ಟರ್' ಎಂದು ಊಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ