ಸಾಂದರ್ಭಿಕ ಚಿತ್ರ 
ರಾಜ್ಯ

ಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ

ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಈ ಕುರಿತು ಹೊರಡಿಸಿರುವ ಸುತ್ತೋಲೆಯಲ್ಲಿ, ದಾಖಲೆಗಳ ಕೊರತೆಯನ್ನು ನೆಪವಾಗಿಟ್ಟುಕೊಂಡು ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸದಂತೆ ಶಾಲೆಗಳಿಗೆ ತಿಳಿಸಲಾಗಿದೆ.

'ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಕಾರಣದಿಂದ ಕೆಲವು ಪೋಷಕರು ಕರ್ನಾಟಕಕ್ಕೆ ವಲಸೆ ಬರುತ್ತಿದ್ದಾರೆ ಮತ್ತು ಕರ್ನಾಟಕದ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ಪಡೆಯಲು ಬಯಸುತ್ತಿದ್ದಾರೆ. ದಾಖಲೆಗಳ ಕೊರತೆಯ ಕಾರಣಕ್ಕೆ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಬಾರದು' ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ರಾಜ್ಯದಲ್ಲಿ ಯಾವ ದರ್ಜೆಯಲ್ಲಿ ಓದುತ್ತಿದ್ದರು ಎಂಬುದರ ಕುರಿತು ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯುವ ಮೂಲಕ ಪ್ರವೇಶವನ್ನು ನೀಡಬೇಕು ಎಂದು ತಿಳಿಸಲಾಗಿದೆ.

ಪ್ರೀ-ಯೂನಿವರ್ಸಿಟಿ ಕೋರ್ಸ್‌ಗಳಿಗೆ ಸಹ ಈ ನಿರ್ದೇಶನಗಳು ಅನ್ವಯಿಸುತ್ತವೆ. ಕಾಲೇಜುಗಳು ಆನ್‌ಲೈನ್‌ ಮೂಲಕ ಅರ್ಹತಾ ಪ್ರಮಾಣಪತ್ರವನ್ನು ಪಡೆಯಲು ಮತ್ತು ನಿಗದಿತ ಸಮಯದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಷರತ್ತಿನೊಂದಿಗೆ ವಿದ್ಯಾರ್ಥಿಗಳು/ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯಲು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT