ಸಾಂದರ್ಭಿಕ ಚಿತ್ರ 
ರಾಜ್ಯ

ಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ

ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಈ ಕುರಿತು ಹೊರಡಿಸಿರುವ ಸುತ್ತೋಲೆಯಲ್ಲಿ, ದಾಖಲೆಗಳ ಕೊರತೆಯನ್ನು ನೆಪವಾಗಿಟ್ಟುಕೊಂಡು ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸದಂತೆ ಶಾಲೆಗಳಿಗೆ ತಿಳಿಸಲಾಗಿದೆ.

'ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಕಾರಣದಿಂದ ಕೆಲವು ಪೋಷಕರು ಕರ್ನಾಟಕಕ್ಕೆ ವಲಸೆ ಬರುತ್ತಿದ್ದಾರೆ ಮತ್ತು ಕರ್ನಾಟಕದ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ಪಡೆಯಲು ಬಯಸುತ್ತಿದ್ದಾರೆ. ದಾಖಲೆಗಳ ಕೊರತೆಯ ಕಾರಣಕ್ಕೆ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಬಾರದು' ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ರಾಜ್ಯದಲ್ಲಿ ಯಾವ ದರ್ಜೆಯಲ್ಲಿ ಓದುತ್ತಿದ್ದರು ಎಂಬುದರ ಕುರಿತು ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯುವ ಮೂಲಕ ಪ್ರವೇಶವನ್ನು ನೀಡಬೇಕು ಎಂದು ತಿಳಿಸಲಾಗಿದೆ.

ಪ್ರೀ-ಯೂನಿವರ್ಸಿಟಿ ಕೋರ್ಸ್‌ಗಳಿಗೆ ಸಹ ಈ ನಿರ್ದೇಶನಗಳು ಅನ್ವಯಿಸುತ್ತವೆ. ಕಾಲೇಜುಗಳು ಆನ್‌ಲೈನ್‌ ಮೂಲಕ ಅರ್ಹತಾ ಪ್ರಮಾಣಪತ್ರವನ್ನು ಪಡೆಯಲು ಮತ್ತು ನಿಗದಿತ ಸಮಯದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಷರತ್ತಿನೊಂದಿಗೆ ವಿದ್ಯಾರ್ಥಿಗಳು/ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯಲು ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT