ಸಾಂದರ್ಭಿಕ ಚಿತ್ರ 
ರಾಜ್ಯ

ಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ

ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಈ ಕುರಿತು ಹೊರಡಿಸಿರುವ ಸುತ್ತೋಲೆಯಲ್ಲಿ, ದಾಖಲೆಗಳ ಕೊರತೆಯನ್ನು ನೆಪವಾಗಿಟ್ಟುಕೊಂಡು ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸದಂತೆ ಶಾಲೆಗಳಿಗೆ ತಿಳಿಸಲಾಗಿದೆ.

'ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಕಾರಣದಿಂದ ಕೆಲವು ಪೋಷಕರು ಕರ್ನಾಟಕಕ್ಕೆ ವಲಸೆ ಬರುತ್ತಿದ್ದಾರೆ ಮತ್ತು ಕರ್ನಾಟಕದ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ಪಡೆಯಲು ಬಯಸುತ್ತಿದ್ದಾರೆ. ದಾಖಲೆಗಳ ಕೊರತೆಯ ಕಾರಣಕ್ಕೆ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಬಾರದು' ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ರಾಜ್ಯದಲ್ಲಿ ಯಾವ ದರ್ಜೆಯಲ್ಲಿ ಓದುತ್ತಿದ್ದರು ಎಂಬುದರ ಕುರಿತು ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯುವ ಮೂಲಕ ಪ್ರವೇಶವನ್ನು ನೀಡಬೇಕು ಎಂದು ತಿಳಿಸಲಾಗಿದೆ.

ಪ್ರೀ-ಯೂನಿವರ್ಸಿಟಿ ಕೋರ್ಸ್‌ಗಳಿಗೆ ಸಹ ಈ ನಿರ್ದೇಶನಗಳು ಅನ್ವಯಿಸುತ್ತವೆ. ಕಾಲೇಜುಗಳು ಆನ್‌ಲೈನ್‌ ಮೂಲಕ ಅರ್ಹತಾ ಪ್ರಮಾಣಪತ್ರವನ್ನು ಪಡೆಯಲು ಮತ್ತು ನಿಗದಿತ ಸಮಯದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಷರತ್ತಿನೊಂದಿಗೆ ವಿದ್ಯಾರ್ಥಿಗಳು/ಪೋಷಕರಿಂದ ಅಂಡರ್‌ಟೇಕಿಂಗ್ ಪಡೆಯಲು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?