ಬಿ.ಕೆ ಹರಿಪ್ರಸಾದ್ ಭೇಟಿಯಾದ ಡಿಕೆ ಶಿವಕುಮಾರ್ 
ರಾಜ್ಯ

ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್- ಬಿಕೆ ಹರಿಪ್ರಸಾದ್ ಭೇಟಿ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರಾ ಡಿಸಿಎಂ?

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು: ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮಂತ್ರಿ ಸ್ಥಾನ ಸಿಗದೇ ಇದ್ದ ಕಾರಣಕ್ಕೆ ತಮ್ಮ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಸರ್ಕಾರ ಹಾಗೂ ಸಿಎಂ ಸಿದ್ಧರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದ ವಿಧಾನಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಅವರ ನಿವಾಸಕ್ಕೆ ಮಂಗಳವಾರ ರಾತ್ರಿ ಡಿಕೆ ಶಿವಕುಮಾರ್‌ ಭೇಟಿ ನೀಡಿ ಮಾತುಕತೆ ನಡೆಸಿದರು.

ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಬಿಲ್ಲವ, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಹರಿಪ್ರಸಾದ್, ‘ನನಗೆ ಸಿಎಂ ಮಾಡುವುದೂ ಗೊತ್ತು. ಅಧಿಕಾರದಿಂದ ಇಳಿಸುವುದೂ ಗೊತ್ತು. ನಮ್ಮ ಸಮುದಾಯದವರು ರಾಜಕೀಯವಾಗಿ ಮುಂದೆ ಬರುತ್ತಿಲ್ಲ. ನಾವು ಯಾರದ್ದೋ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತಿದೆ’ ಎಂದಿದ್ದರು. ಈ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಹರಿಪ್ರಸಾದ್‌ ಅವರ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಆರೋಪ– ಪ್ರತ್ಯಾರೋಪಕ್ಕೆ ವಸ್ತುವಾಗುತ್ತಿದ್ದಂತೆ, ಹರಿಪ್ರಸಾದ್‌ ಅವರನ್ನು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿ ಕೆಲಹೊತ್ತು ಸಮಾಲೋಚನೆ ನಡೆಸಿದ್ದಾರೆ.

ಹಿರಿಯ ನಾಯಕನಾಗಿದ್ದರೂ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲವೆಂಬ ಕಾರಣಕ್ಕೆ ಹರಿಪ್ರಸಾದ್‌ ಮುನಿಸಿಕೊಂಡಿದ್ದಾರೆ. ‘ಮಂತ್ರಿ, ಸಿಎಂ ಸೇರಿ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ’ ಎಂದೂ ಹರಿಪ್ರಸಾದ್‌ ಅವರು ಸೋಮವಾರ ಟ್ವೀಟ್‌ ಮಾಡಿದ್ದರು.

ಪಕ್ಷದೊಳಗಿನ ಆಂತರಿಕ ವಿಚಾರಗಳ ಬಗ್ಗೆ ಹರಿಪ್ರಸಾದ್‌ ಮತ್ತು ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್. ಶಂಕರ್ ಜೊತೆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT