ಸಾಂದರ್ಭಿಕ ಚಿತ್ರ 
ರಾಜ್ಯ

ಜುಲೈ 29 ರಂದು ಮೊಹರಂ: ಜನರಿಗೆ ತೊಂದರೆಯಾಗದಂತೆ ಆಚರಿಸಲು ಯುವಕರಿಗೆ ಸಮುದಾಯದ ಮುಖಂಡರ ಕರೆ

ಜುಲೈ 29 ರಂದು ಮೊಹರಂ ಆಚರಿಸಲಾಗುತ್ತಿದ್ದು, ಇತರ ನಾಗರಿಕರಿಗೆ ತೊಂದರೆ ಅಥವಾ ನೋಯಿಸುವ ಯಾವುದೇ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಸಮುದಾಯದ ಸದಸ್ಯರಿಗೆ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ.

ಬೆಂಗಳೂರು: ಜುಲೈ 29 ರಂದು ಮೊಹರಂ ಆಚರಿಸಲಾಗುತ್ತಿದ್ದು, ಇತರ ನಾಗರಿಕರಿಗೆ ತೊಂದರೆ ಅಥವಾ ನೋಯಿಸುವ ಯಾವುದೇ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಸಮುದಾಯದ ಸದಸ್ಯರಿಗೆ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ.

ರಸ್ತೆ ತಡೆ, ಡಿಜೆ ಸೆಟ್‌ ಹಾಕುವುದು, ರ್ಯಾಲಿ, ಸಂಭ್ರಮಾಚರಣೆ ಮಾಡುವುದನ್ನು ತಪ್ಪಿಸಬೇಕು ಎಂದು ಪ್ರಬಲ ಸಂದೇಶ ರವಾನಿಸಿದ್ದಾರೆ,

ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನ ಮಸೀದಿಯ ಕಾಬಾದ ಪ್ರತಿಕೃತಿಗಳನ್ನು ಬಳಸದಂತೆ ಸಮುದಾಯದ ಸದಸ್ಯರಿಗೆ ತಿಳಿಸಲು ಬೆಂಗಳೂರಿನ ಎಲ್ಲಾ ಮಸೀದಿಗಳಿಗೆ ಸಂದೇಶವನ್ನು ಕಳುಹಿಸಲಾಗಿದೆ ಎಂದು ಸಿಟಿ ಮಾರ್ಕೆಟ್ ಜಾಮಿಯಾ ಮಸೀದಿಯ ಮುಖ್ಯ ಅರ್ಚಕ (ಸುನ್ನಿ ಪಂಗಡ) ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದ್ದಾರೆ.

ಡಿಜೆ ಸೆಟ್‌ಗಳ ಬಳಕೆ, ಡ್ರಮ್ ಬಾರಿಸುವುದು, ರ್ಯಾಲಿಗಳು, ನೃತ್ಯ ಮತ್ತು ಘೋಷಣೆಗಳನ್ನು ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ, ಇದರಿಂದ ಸಾರ್ವಜನಿಕರಿಗೆ ಅನಾನುಕೂಲತೆ ಉಂಟಾಗುತ್ತದೆ. ಯುವಕರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಮುದಾಯದವರಲ್ಲಿ ಮನವಿ ಮಾಡುತ್ತಿರುವುದಾಗಿ ರಶಾದಿ ಹೇಳಿದ್ದಾರೆ.

ರಿಚ್ಮಂಡ್ ರಸ್ತೆಯ ಜಾನ್ಸನ್ ಮಾರ್ಕೆಟ್ ನಡುವೆ ಹೊಸೂರು ರಸ್ತೆಯ ಸ್ಮಶಾನದವರೆಗೆ ಸಾಂಪ್ರದಾಯಿಕ  ಮೆರವಣಿಗೆಗೆ ಶಿಯಾ ಸಮುದಾಯದ ಮುಖಂಡರು ಈಗಾಗಲೇ ಅನುಮತಿ ಪಡೆದಿದ್ದಾರೆ. ನಾವು ಕರ್ಬಲಾ ಮೈದಾನದಲ್ಲಿ  ಹುತಾತ್ಮ ಹಜರತ್ ಹುಸೇನ್ ಅವರರಿಗೆ ಸಂತಾಪ ಸೂಚಿಸಲು ಸಾಂಪ್ರದಾಯಿಕ ರ್ಯಾಲಿಯನ್ನು ನಡೆಸುತ್ತೇವೆ. ಎಂದಿದ್ದಾರೆ.

ಯುವಕರ ಗಮನ ಶಿಕ್ಷಣ, ಆರೋಗ್ಯ ಮತ್ತು ಶಾಂತಿಯತ್ತ ಗಮನ ಹರಿಸುವುದಾಗಿದೆ ಎಂದು ಅಂಜುಮನ್-ಎ-ಇಮಾಮಿಯಾ (ಶಿಯಾ ಪ್ರತಿನಿಧಿ ಸಂಸ್ಥೆ) ಸದಸ್ಯ ಬಖರ್ ಅಬ್ಬಾಸ್ ಅಬಿದ್ ಹೇಳಿದರು. ಮೆರವಣಿಗೆಯು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗಿ ಜುಲೈ 29 ರಂದು ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT