ರಾಜ್ಯ

ನಮ್ಮ ಮೆಟ್ರೋ ರೈಲಿನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವು: ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲು!

Vishwanath S

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಕುಸಿದು ಬಿದ್ದು ಕೆಲ ನಿಮಿಷಗಳ ಕಾಲ ನರಳಾಡಿ ವೃದ್ಧ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಕಳೆದ ಜುಲೈ 20ರಂದು ಪ್ರಕರಣ ನಡೆದಿದ್ದು ಮೃತ ವ್ಯಕ್ತಿಯನ್ನು 67 ವರ್ಷದ ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಇನ್ನು ರೈಲಿನಲ್ಲಿ ಕುಸಿದು ಬಿದ್ದ ಕೂಡಲೇ ಸಕಾಲಕ್ಕೆ BMRCL ಸಿಬ್ಬಂದಿ ವೈದ್ಯಕೀಯ ನೆರವು ನೀಡುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ತಿಮ್ಮೇಗೌಡ ಅವರು ಜುಲೈ 20ರಂದು ಕೆಂಗೇರಿಗೆ ತಲುಪಲು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 9 ಗಂಟೆಗೆ ರೈಲು ಹತ್ತಿದ್ದರು. ಆದರೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ರೈಲು ಹೊರಡುವಷ್ಟರಲ್ಲಿ ಅವರು ಕುಸಿದು ಬಿದ್ದಿದ್ದು ಪ್ರಾಣ ಬಿಟ್ಟಿದ್ದರು.

ತಿಮ್ಮೇಗೌಡ ಅವರ ಪುತ್ರ ಮುತ್ತುರಾಜ್ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

SCROLL FOR NEXT