ಖೂಷ್ಬೂ ಸುಂದರ್ 
ರಾಜ್ಯ

ಉಡುಪಿ ಕಾಲೇಜು ವಿದ್ಯಾರ್ಥಿನಿಯ ವಿಡಿಯೊ ಪ್ರಕರಣ: ರಾಜಕೀಯಗೊಳಿಸಬೇಡಿ, ಎಲ್ಲಾ ಆಯಾಮಗಳಲ್ಲಿ ತನಿಖೆ- ಖುಷ್ಬೂ ಸುಂದರ್

ದೇಶಾದ್ಯಂತ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಕಾಲೇಜಿಗೆ ಭೇಟಿ ನೀಡಿದರು. 

ಉಡುಪಿ: ದೇಶಾದ್ಯಂತ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಕಾಲೇಜಿಗೆ ಭೇಟಿ ನೀಡಿದರು. 

ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆಯಾಗಬೇಕಾಗಿದೆ. ಕಾನೂನೂ ತನ್ನ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಯಾರು ಒತ್ತಡ ಹೇರಬಾರದು. ಸಂತ್ರಸ್ತೆ ಮತ್ತು ಆರೋಪಿ ಇಬ್ಬರನ್ನೂ ಭೇಟಿ ಮಾಡುವುದಾಗಿ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ರಾಜಕೀಯ ಬಣ್ಣ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್,  ಸಂತ್ರಸ್ತೆ ಹಾಗೂ ಆಕೆಯ ಕುಟುಂಬವನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ರಾಜಕೀಯ ಪಕ್ಷಗಳು ಇದರಲ್ಲಿ ಹಸ್ತಕ್ಷೇಪ ಮಾಡಬಾರದು. ತಾನೂ ಯಾವುದೇ ರಾಜಕೀಯ ಪಕ್ಷವೊಂದರ ಪರವಾಗಿ ಬಂದಿಲ್ಲ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಆಗಮಿಸಿದ್ದು, ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದರು. 

ಘಟನೆಯ ವಿಚಾರಣೆಯ ಭಾಗವಾಗಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳೊಂದಿಗೆ ಖುಷ್ಬೂ ಸುಂದರ್ ಇಂದು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ