ಸಂಗ್ರಹ ಚಿತ್ರ 
ರಾಜ್ಯ

ನಕ್ಸಲ್ ಚಟುವಟಿಕೆಯಲ್ಲಿ ಭಾಗಿ: ಸಾಕ್ಷ್ಯಾಧಾರ ಕೊರತೆ, 3 ಆರೋಪಿಗಳ ಬಿಡುಗಡೆಗೊಳಿಸಿದ ವಿಶೇಷ ನ್ಯಾಯಾಲಯ

ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳನ್ನು ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ.

ಬೆಂಗಳೂರು: ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳನ್ನು ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ.

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಿ.ಜಿ.ಕೃಷ್ಣಮೂರ್ತಿ ಅಲಿಯಾಸ್ ಭಾಸ್ಕರ್ (35), ಶಿವಮೊಗ್ಗ ಜಿಲ್ಲೆಯ ಹೊಸಗದ್ದೆ ಪ್ರಭಾ ಅಲಿಯಾಸ್ ನೇತ್ರ (24), ಚಿಕ್ಕಮಗಳೂರು ಜಿಲ್ಲೆಯ ಸಾವಿತ್ರಿ ಅಲಿಯಾಸ್ ಉಷಾ (18) ಎಂಬುವವರನ್ನು ನ್ಯಾಯಾಲಯ ಬಿಡಗುಡೆ ಮಾಡಿದೆ.

ಮೂವರು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಹೀಗಾಗಿ ಐಪಿಸಿ ಮತ್ತು ಯುಎಪಿಎಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ಗಂಗಾಧರ ಸಿ.ಎಂ ತೀರ್ಪಿನಲ್ಲಿ ಹೇಳಿದ್ದಾರೆ.

ಆರೋಪಿ ನಂ.1 ರಮೇಶ್ ಅವರ ಸ್ವಯಂಪ್ರೇರಿತ ಹೇಳಿಕೆಯನ್ನು ಹೊರತುಪಡಿಸಿ, ಆರೋಪಿಗಳು ಮಲಪ್ಪುರಂನಲ್ಲಿ ಸಭೆ ನಡೆಸಿದ್ದಾರೆಂದು ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮೇ 2016 ರಲ್ಲಿ ಕೇರಳದ ಮಲಪ್ಪುರಂನ ಪಶ್ಚಿಮ ಘಟ್ಟಗಳಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸಲು ಮತ್ತು ಅದೇ ವರ್ಷ ಸೆಪ್ಟೆಂಬರ್‌ ತಿಂಗಳಿನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ಸಂಚು ರೂಪಿಸಲು ಸಭೆ ನಡೆದಿದ್ದು, ಈ ಸಭೆಯಲ್ಲಿ ಹಾಜರಾಗಿದ್ದಾರೆಂದು ಕೃಷ್ಣಮೂರ್ತಿ, ನೇತ್ರ ಮತ್ತು ಸಾವಿತ್ರಿಯವರ ವಿರುದ್ಧ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ