ಸಿಎಂ ಸಿದ್ದರಾಮಯ್ಯ 
ರಾಜ್ಯ

ಗಣಿ ಗುತ್ತಿಗೆ ಕಂಪನಿಗಳ ಸಮಸ್ಯೆ ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆ ಸ್ಥಾಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಅರಣ್ಯ ಇಲಾಖೆ ಅನುಮತಿ ಮತ್ತು ಗಣಿ ಗುತ್ತಿಗೆ ಕಂಪನಿಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಅರಣ್ಯ ಇಲಾಖೆ ಅನುಮತಿ ಮತ್ತು ಗಣಿ ಗುತ್ತಿಗೆ ಕಂಪನಿಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ, ಕಂದಾಯ ಮತ್ತು ಅರಣ್ಯ ಸಚಿವರು ಮತ್ತು ಅಧಿಕಾರಿಗಳು ಮಾಸಿಕ ಸಭೆಗಳನ್ನು ನಡೆಸಿ ಗಣಿಗಾರಿಕೆ ಕಂಪನಿಗಳ ಅರಣ್ಯ ಇಲಾಖೆ ಒಪ್ಪಿಗೆ ಮತ್ತು ಇತರ ಅನುಮತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಏಕಗವಾಕ್ಷಿ ವ್ಯವಸ್ಥೆಯ ಮಾದರಿಯಲ್ಲಿ ಪರಿಹರಿಸಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಒಳಪಡುವ ಸಂಸ್ಥೆಗಳ ಜೊತೆಗೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅವರು ಉನ್ನತ ಮಟ್ಟದ ಸಭೆ ನಡೆಸಿದರು.

ಗಣಿ ಕಂಪನಿಗಳು ಅರಣ್ಯೀಕರಣಕ್ಕೆ ಪರ್ಯಾಯವಾಗಿ ಭೂಮಿ ಒದಗಿಸದ ಕಾರಣ ಅರಣ್ಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಹಲವು ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಆನೆ ಹಾಗೂ ಇತರೆ ಕಾಡುಪ್ರಾಣಿಗಳ ಹಾವಳಿಯಿಂದ ಅರಸೀಕೆರೆ ಹಾಗೂ ರಾಜ್ಯದ ಇತರೆ ಭಾಗದ ರೈತರು ತಮ್ಮ ಕೃಷಿ ಭೂಮಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಅಂತಹ ರೈತರಿಂದ ಕಂಪನಿಗಳು ಭೂಮಿ ಖರೀದಿಸಿ ಅರಣ್ಯೀಕರಣಕ್ಕೆ ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್ ಮತ್ತು ಮಿನರಲ್ ಎಕ್ಸ್‌ಪ್ಲೋರೇಷನ್ ಕಾರ್ಪೊರೇಷನ್ ಲಿಮಿಟೆಡ್ ಮೂಲಕ ಕರ್ನಾಟಕದಲ್ಲಿ ಖನಿಜ ಪರಿಶೋಧನೆ ನಡೆಸಲು ಅನುಮತಿ ನೀಡುವಂತೆ ಪರಿವೇಶ್ ಪೋರ್ಟಲ್‌ನಲ್ಲಿ ಕೇಂದ್ರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಆದಷ್ಟು ಬೇಗ ಅನುಮತಿ ಪಡೆಯಲು ಈ ಕಂಪನಿಗಳೊಂದಿಗೆ ಚರ್ಚಿಸಲು ಸಿದ್ದರಾಮಯ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸೂಚಿಸಿದರು. 

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯಿಂದ ವಶಪಡಿಸಿಕೊಂಡ 2.7 ಮಿಲಿಯನ್ ಟನ್ ಅದಿರನ್ನು ವಿಲೇವಾರಿ ಮಾಡಲು ಕಾನೂನು ತಜ್ಞರಿಂದ ಸಲಹೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT