ಡಿ ಕೆ ಶಿವಕುಮಾರ್ 
ರಾಜ್ಯ

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ ಕೆ ಶಿವಕುಮಾರ್

ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು.

3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.

ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

2ನೇ ಟಿ20: ಭಾರತಕ್ಕೆ 214 ಬೃಹತ್ ರನ್ ಗುರಿ ನೀಡಿದ ಆಫ್ರಿಕಾ

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ಗೆ ಷರತ್ತುಬದ್ಧ ಜಾಮೀನು!

SCROLL FOR NEXT