ಡಿ ಕೆ ಶಿವಕುಮಾರ್ 
ರಾಜ್ಯ

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ ಕೆ ಶಿವಕುಮಾರ್

ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು.

3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.

ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್- ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ!

'ನಾನು ನೆಹರು, ರಾಜೀವ್ ವಾದಿ' ಆದ್ರೆ ರಾಹುಲ್ ವಾದಿಯಲ್ಲ- ಮಣಿಶಂಕರ್ ಅಯ್ಯರ್

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

'ವಾಸನೆ ಮತ್ತು ರುಚಿ ಸಾಮರ್ಥ್ಯವೇ ಹೋಗಿತ್ತು'; ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟನ ಸ್ಫೋಟಕ ಹೇಳಿಕೆ!

ನಟ ಸಲ್ಮಾನ್ ಖಾನ್ ತಂದೆ ಆರೋಗ್ಯ ಏರುಪೇರು: Brain Haemorrhage, ಮುಂಬೈ ಆಸ್ಪತ್ರೆಗೆ ದಾಖಲು!

SCROLL FOR NEXT