ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ಹಾಸ್ಟೆಲ್ ಆಹಾರ ಸೇವಿಸಿದ 7 ವಿದ್ಯಾರ್ಥಿಗಳು ಅಸ್ವಸ್ಥ

ಗುಂಡ್ಲುಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 7 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಗುರುವಾರ ನಡೆದಿದೆ.

ಮೈಸೂರು: ಗುಂಡ್ಲುಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 7 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಗುರುವಾರ ನಡೆದಿದೆ.

ಶಾಲಾ ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗರಗಹನಳ್ಳಿ ಮೊರಾರ್ಜಿ ದೇಸಾಯಿ ಶಾಲೆಯ ಹಾಸ್ಟೆಲ್‌ಗೆ ಸ್ಥಳಾಂತರ ಮಾಡಿಸ ವಸತಿ ಕಲ್ಪಿಸಿ ತರಗತಿ ನಡೆಸಲಾಗುತ್ತಿತ್ತು.

ಇದರಂತೆ ಹಾಸ್ಟೆಲ್ ನಲ್ಲಿ ನಿನ್ನೆ ಆಹಾರ ಸೇವಿಸಿದ ಬಳಿಕ ಏಳು ವಿದ್ಯಾರ್ಥಿಗಳು ಹೊಟ್ಟೆನೋವು ಎಂದು ಹೇಳಿದ್ದಾರೆ. ಕೂಡಲೇ ಅವರನ್ನು ಹೊರೆಯಾಳದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಾರದ ಹಿಂದೆಯಷ್ಟೇ ಯಡವನಹಳ್ಳಿ ಹಾಸ್ಟೆಲ್‌ನಲ್ಲಿ ಕೋಳಿ ಮಾಂಸ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಇದೀಗ ಅದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಿ.ಮಲ್ಲಿಕಾರ್ಜುನ ಅವರು, ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದಾಗಿ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು.

ಈ ನಡುವೆ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದ ಪೋಷಕರನ್ನು ನಿಟ್ಟುಸಿರು ಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT