ಸಂಗ್ರಹ ಚಿತ್ರ 
ರಾಜ್ಯ

ಕೊಪ್ಪಳದಲ್ಲಿ ನೀರು ಕಲುಷಿತಗೊಂಡು ಸಾವು ಸಂಭವಿಸಿಲ್ಲ: ಮರಣೋತ್ತರ ಪರೀಕ್ಷೆ ವರದಿ

ಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.

ಮೃತಪಟ್ಟಿದ್ದ ಮೂವರ ಪೈಕಿ ಇಬ್ಬರು ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೇ 31ರಂದು ಮೃತಪಟ್ಟ ಬಸರಿಹಾಳ ಗ್ರಾಮದ ಹೊನಮ್ಮ ಎಂಬ ವೃದ್ಧೆಯ ಸಾವಿಗೆ ಹೃದಯ ಮತ್ತು ಕಿಡ್ನಿ ವೈಫಲ್ಯ ಕಾರಣವಾಗಿತ್ತು. ಅದೇ ರೀತಿ ಜೂನ್ 6 ರಂದು ಮೃತಪಟ್ಟಿದ್ದ ಒಂಬತ್ತು ತಿಂಗಳ ಮಗು ಶ್ರುತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ವರದಿಯಲ್ಲಿ ತಿಳಿಸಲಾಗಿದೆ.

ಕಳೆದ ಮೂರು ತಿಂಗಳಲ್ಲಿ ಆರೋಗ್ಯ ಇಲಾಖೆಯಿಂದ 4,000 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಕೆಲವು ಮೂಲಗಳು ಕಲುಷಿತಗೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಲ್ಲೆಲ್ಲಿ ಬೋರ್‌ವೆಲ್‌ಗಳು ಕಲುಷಿತಗೊಂಡಿವೆಯೋ, ಅವುಗಳನ್ನು ಮುಚ್ಚಲಾಗಿದೆ. ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದರಿಂದ ರಾಸಾಯನಿಕ ಮಾಲಿನ್ಯ ಉಂಟಾಗಿದೆ. ಕೆಲ ನೀರಿನ ಮೂಲದಲ್ಲಿ ಬ್ಯಾಕ್ಟೀರಿಯಾದ ಮಾಲಿನ್ಯವೂ ಕಂಡುಬಂದಿದೆ. ಈ ಎಲ್ಲಾ ಬೋರ್‌ವೆಲ್‌ಗಳನ್ನು ಮುಚ್ಚಲಾಗಿದೆ. ಕುಡಿಯುವ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಪರೀಕ್ಷೆಗಳ ನಡೆಸುವ ಸಲುವಾಗಿ ಕಳೆದ ಎರಡು ತಿಂಗಳಲ್ಲಿ ಎಲ್ಲಾ 153 ಗ್ರಾಮ ಪಂಚಾಯಿತಿಗಳಲ್ಲಿ ಸ್ವಸಹಾಯ ಗುಂಪುಗಳ ಐದು ಮಹಿಳೆಯರಿಗೆ ತರಬೇತಿ ನೀಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, 902 ಓವರ್‌ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಲಾಗಿದೆ. ಗ್ರಾಮ ಪಂಚಾಯಿತಿಗಳು, ತಗ್ಗು ಪ್ರದೇಶದಲ್ಲಿದ್ದ ಬೋರ್‌ವೆಲ್‌ಗಳನ್ನು ಎತ್ತರಿಸಿ, ಬೋರ್‌ವೆಲ್‌ಗಳ ಬಳಿ ಕಲುಷಿತ ನೀರು ಸಂಗ್ರಹವಾಗದಂತೆ ಸಿಮೆಂಟ್ ಗಳನ್ನು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT