ಸಿದ್ದರಾಮಯ್ಯ 
ರಾಜ್ಯ

ನಿಮ್ಮ ಬೂಟಾಟಿಕೆ ನಿಲ್ಲಿಸಿ, ಸಾಕು ಮಾಡಿ ಸೋಗು; ಟ್ವೀಟ್ ಮಾಡಿದ್ದು ಅಪರಾಧವೊ, ವಿಡಿಯೊ ಮಾಡಿದ್ದು ದೊಡ್ಡ ಅಪರಾಧವೊ?

ಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ

ಬೆಂಗಳೂರು: ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ. ಹಿಟ್ಲರ್, ಮುಸಲೋನಿಯವರನ್ನೇ ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ. ಸಾಕು ಮಾಡಿ ಸೋಗು ಎಂದು ಮಾಜಿ ಸಚಿವ ವಿ ಸುನಿಲ್‌ ಕುಮಾರ್‌ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹಿಟ್ಲರ್ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಹಕ್ಕು, ಮಾನ- ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವೇ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಅಪಮಾನವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ? ದಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ.

ವಿಡಿಯೋ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ರಾಜ್ಯದ ಗಮನ ಸೆಳೆದ ರಶ್ಮಿಯವರ ಮನೆಗೆ ರಾತ್ರೋರಾತ್ರಿ ತೆರಳಿ ವಿಚಾರಣಾ ಹಿಂಸೆ ಮಾಡುವ ಪೊಲೀಸರಿಗೆ ಸಹ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ತೆರಳಿ ವಿಚಾರಣೆ ನಡೆಸುವ ತಾಕತ್ತಿಲ್ಲವೇ? ಟ್ವೀಟ್ ಮಾಡಿದ್ದು ದೊಡ್ಡ ಅಪರಾಧವೊ, ವಿಡಿಯೊ ಮಾಡಿದ್ದು ಅಪರಾಧವೊ ಎಂದು ಪ್ರಶ್ನಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಹಾಂಡ್ ಗ್ರೆನೈಡ್ ಹಾಗೂ ಸ್ಫೋಟಕಗಳನ್ನು ಮನೆಯಲ್ಲಿಟ್ಟುಕೊಂಡವರನ್ನು ಉಗ್ರರು ಎನ್ನುವುದಕ್ಕೆ ನಿಮಗೆ ಶಕ್ತಿಯಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಅಮಾಯಕರು. ಆದರೆ ಉಡುಪಿ ಕಾಲೇಜಿನಲ್ಲಿ ನಡೆದಿದ್ದು, ತಮಾಷೆ ಪ್ರಕರಣ, ಮಕ್ಕಳಾಟ! ನೀವು ಕರ್ನಾಟಕದ ಗೃಹ ಸಚಿವರೋ ಅಥವಾ ಒಂದು ವರ್ಗಕ್ಕೋ? ಎಂದು ಕುಟುಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

SCROLL FOR NEXT