ನಾಲೆಗೆ ಉರುಳಿ ಬಿದ್ದ ಕಾರು 
ರಾಜ್ಯ

ಮಂಡ್ಯ: ನಾಲೆಗೆ ಉರುಳಿ ಬಿದ್ದ ಕಾರು, ನಾಲ್ವರು ಮಹಿಳೆಯರು ಸಾವು

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಇಂದು ರಾತ್ರಿ ರಾತ್ರಿ 8.30ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಖಾ ನಾಲೆಗೆ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಮೃತ ಮಹಿಳೆಯರನ್ನು ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಎಂದು ಗುರುತಿಸಲಾಗಿದೆ. 

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ನಾಲ್ವರು ಮಹಿಳೆಯರ ಶವವನ್ನು ನಾಲೆ ನೀರಿನಿಂದ ಹೊರ ತೆಗೆದಿದ್ದಾರೆ‌. ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT