ವಂಶಿಕಾ, ನಿಶಾ ನರಸಪ್ಪ ಸಾಂದರ್ಭಿಕ ಚಿತ್ರ 
ರಾಜ್ಯ

ವಂಶಿಕಾ ಹೆಸರಲ್ಲಿ ವಂಚನೆ ಆರೋಪ ಸುಳ್ಳು, ನನ್ನ ವಿರುದ್ಧ ವ್ಯವಸ್ಥಿತ ಸಂಚು- ನಿಶಾ ನರಸಪ್ಪ

ಮಾಸ್ಟರ್ ಆನಂದ್ ಅವರ ಪುತ್ರಿ, ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ ಆರೋಪ ಸುಳ್ಳು, ಯಶಸ್ವಿನಿ ಸೇರಿದಂತೆ ಎಲ್ಲರೂ ಸೇರಿ ನನ್ನ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಜೈಲಿಗೆ ಕಳುಹಿಸಿದರು ಎಂದು ಈ ಪ್ರಕರಣದಲ್ಲಿ ಆರೋಪಿ ಆಗಿರುವ ನಿಶಾ ನರಸಪ್ಪ ಹೇಳಿದ್ದಾರೆ.

ಬೆಂಗಳೂರು: ಮಾಸ್ಟರ್ ಆನಂದ್ ಅವರ ಪುತ್ರಿ, ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ ಆರೋಪ ಸುಳ್ಳು, ಯಶಸ್ವಿನಿ ಸೇರಿದಂತೆ ಎಲ್ಲರೂ ಸೇರಿ ನನ್ನ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಜೈಲಿಗೆ ಕಳುಹಿಸಿದರು ಎಂದು ಈ ಪ್ರಕರಣದಲ್ಲಿ ಆರೋಪಿ ಆಗಿರುವ ನಿಶಾ ನರಸಪ್ಪ ಹೇಳಿದ್ದಾರೆ.

ಜೈಲಿನಿಂದ ಹೊರಬಂದ ಬಳಿಕ ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಏಳು ವರ್ಷಗಳಿಂದ ಎನ್.ಎನ್‌.ಪ್ರೊಡಕ್ಷನ್ ಅಂತ ಕಂಪನಿ ನಡೆಸುತ್ತಿದ್ದೇನೆ. ಅದರ ಮೂಲಕ ಸಾಕಷ್ಟು ಇವೆಂಟ್ ಮಾಡಿದ್ದು, ನನ್ನ ಕಂಪನಿಗೆ ಒಂದೂ ಕಪ್ಪುಚುಕ್ಕೆ ಇರಲಿಲ್ಲ. ಆದರೆ ಈಗ ಯಶಸ್ವಿನಿಯಿಂದ ಕಂಪನಿಗೆ ಕೆಟ್ಟ ಹೆಸರು ಬಂದಿದೆ. ನನ್ನ ವಿರುದ್ಧ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಆರೋಪಿಸಿದರು. 

ಒಂದು ವರ್ಷದಿಂದಲೂ ಯಶಸ್ವಿನಿ ಪರಿಚಯವಿತ್ತು. ಅವರು ಪ್ರಮೋಷನ್​​ಗಾಗಿ ಬರುತ್ತಿದ್ದರು. ಅವರು ಪುಗ್ಸಟ್ಟೆಯಾಗಿ ಯಾವುದೇ ಇವೆಂಟ್​ಗೆ ಬಂದಿರಲಿಲ್ಲ. ಪ್ರತಿಯೊಂದಕ್ಕೂ ಹಣ ಪಡೆದೇ ಬಂದಿದ್ದಾರೆ. ಎಲ್ಲಾ ವಾಹಿನಿಗಳಲ್ಲೂ ಸಂಭಾವನೆ ಪಡೆದೇ ಅವರು ಭಾಗವಹಿಸೋದು. ಅವರಿಗೆ  ರೂ. 20,000 ಹಣ ಮಾತ್ರ ಕೊಡಬೇಕಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ನಾನು ಅವರಿಗೆ ಪರಿಚಯ ಇಲ್ಲ ಅಂತಾ ಹೇಳಿದರು. ನನ್ನ ಪ್ರೊಡಕ್ಷನ್ ಕಂಪನಿಗೆ ಏಳು ವರ್ಷ, ವಂಶಿಕಾಗೆ ಐದು ವರ್ಷ. ನಾನು ಇವರ ಮಗಳಿಂದಲೇನಾ ಬದುಕಿರೋದು? ಅಂತಾ ಪ್ರಶ್ನಿಸಿದ ನಿಶಾ, ನನ್ನನ್ನು ಪರ್ಸನಲ್ ಆಗಿ ಟಾರ್ಗೆಟ್ ಮಾಡಿದವರಿಗೆ ಯಶಸ್ವಿನಿ ಸಹಾಯ ಮಾಡಿದ್ದಾರೆ ಎಂದರು.

ಹರ್ಷಿತಾ ಎಂಬ ಹುಡುಗಿ ಸುಮಾರು ಎರಡು ವರ್ಷ ನನ್ನ ಕಂಪನಿಯಲ್ಲಿ ಕೆಲಸ ಮಾಡಿದರು. ಅವರಿಗೆ ನನ್ನ ಎಲ್ಲ ಬ್ಯಾಂಕ್ ಡಿಟೇಲ್ಸ್​ ಗೊತ್ತಿತ್ತು. ಬಳಿಕ ಅವರು ನನ್ನ ಕಂಪನಿಯಲ್ಲಿ ಶೇರ್ ಕೇಳಿದ್ರು, ಅದಕ್ಕೆ ನಾನು ಒಪ್ಪಲಿಲ್ಲ. ಆಗ ಅವರ ಐಫೋನ್​​ನಲ್ಲಿ ನನ್ನ ಇನ್​ಸ್ಟಾಗ್ರಾಂ ಓಪನ್​ ಮಾಡಿದ್ರು, ಅದನ್ನು ಪ್ರಶ್ನೆ ಮಾಡಿದ ಬಳಿಕ ಕೆಲಸ ಬಿಟ್ಟರು. ಅಲ್ಲಿಂದ  ತೊಂದರೆ  ಶುರುವಾಯ್ತು. ಇವರೆಲ್ಲರೂ ಸೇರಿ ಆರು ತಿಂಗಳೂ ಕಂಪ್ಲೀಟ್ ಪ್ಲ್ಯಾನ್​ ಮಾಡಿ‌ ನನ್ನ ಮೇಲೆ‌ ವ್ಯವಸ್ಥಿತವಾಗಿ ಸಂಚು ಮಾಡಿದ್ದಾರೆ ಎಂದು ನಿಶಾ ಆರೋಪಿಸಿದರು. 

ಇದೇ ವೇಳೆ ಮಾತನಾಡಿದ ನಿಶಾ ನರಸಪ್ಪ ಪರ ವಕೀಲ ಗೋವರ್ಧನ್, ಕಂಪನಿ ಮುಚ್ಚಿಸಲು ಈ ರೀತಿಯ ಆರೋಪ ಮಾಡಲಾಗಿದ್ದು, ಯಶಸ್ವಿನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT