ಉಡುಪಿ ವಿದ್ಯುತ್ ನಿಗಮ. (Photo | Adani Power website) 
ರಾಜ್ಯ

ಉಡುಪಿ: ಅದಾನಿ ವಿದ್ಯುತ್ ಸ್ಥಾವರದಲ್ಲಿ ಕಟ್ಟಡ ಕೆಡವುವ ವೇಳೆ ಕಾರ್ಮಿಕ ಸಾವು

ಪಡುಬಿದ್ರಿ ಸಮೀಪದ ಯಳ್ಳೂರಿನಲ್ಲಿರುವ ಅದಾನಿ-ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಆವರಣದಲ್ಲಿ ಕಟ್ಟಡವನ್ನು ಕಿತ್ತುಹಾಕುವ ಪ್ರಕ್ರಿಯೆ ವೇಳೆ ಕಟ್ಟಡದ ಬೀಮ್ ಕುಸಿದು ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಪಡುಬಿದ್ರಿ: ಪಡುಬಿದ್ರಿ ಸಮೀಪದ ಯಳ್ಳೂರಿನಲ್ಲಿರುವ ಅದಾನಿ-ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಆವರಣದಲ್ಲಿ ಕಟ್ಟಡವನ್ನು ಕಿತ್ತುಹಾಕುವ ಪ್ರಕ್ರಿಯೆ ವೇಳೆ ಕಟ್ಟಡದ ಬೀಮ್ ಕುಸಿದು ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಈ ಘನೆಯಲ್ಲಿ ಇತರ ಮೂವರು ಮಂದಿ ಗಾಯಗೊಂಡಿದ್ದಾರೆ.

ರಾಜಸ್ಥಾನ ರಾಜ್ಯದ ಮುಲಾರಾಮ್ ಸಿಂಗ್ (21) ಮೃತ ವ್ಯಕ್ತಿ. ಗಾಯಗೊಂಡವರು ಪಂಜಾಬ್ ಮೂಲದ ಸುಕ್ವಿಂದರ್ ಸಿಂಗ್ ಮತ್ತು ಬಲ್ಜೀರ್ ಸಿಂಗ್ ಮತ್ತು ರಾಜಸ್ಥಾನದ ರಾಮಚಂದ್ರ ಮೀನಾ.

ಮೂಲಗಳ ಪ್ರಕಾರ ಅದಾನಿ ಪವರ್ ಕಂಪನಿಯು ಇಂಧನ ಗ್ಯಾಸ್ ಡಿಸ್ಮ್ಯಾಂಟ್ಲರ್ (ಸಲ್ಫರ್ ಗ್ಯಾಸ್) ನ ಹಳೆಯ ರಚನೆಯನ್ನು ಕೆಡವುವ ಗುತ್ತಿಗೆಯನ್ನು ಗುತ್ತಿಗೆದಾರನಿಗೆ ನೀಡಿದ್ದು, ಅವರು ಮತ್ತೊಬ್ಬರಿಗೆ ಕಾರ್ಯವನ್ನು ವಹಿಸಿದ್ದರು. ಉಪ ಗುತ್ತಿಗೆದಾರರು ಉತ್ತರ ಭಾರತದಿಂದ ಸುಮಾರು 50 ಜನರನ್ನು ನೇಮಿಸಿಕೊಂಡಿದ್ದರು ಮತ್ತು ಕಳೆದ ಆರು ತಿಂಗಳಿಂದ ಇದನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಲಾಗಿದೆ.

ಶುಕ್ರವಾರ ನಾಲ್ವರು ಕಾರ್ಮಿಕರು ಕ್ರೇನ್ ಸಹಾಯದಿಂದ ಬೀಮ್ ತೆಗೆಯುತ್ತಿದ್ದಾಗ ಬೀಮ್ ಕುಸಿದು ಬಿದ್ದಿದೆ. ಅದು ಕುಸಿದು ಬೀಳುತ್ತಿದ್ದಂತೆ ಮುಲಾರಾಮ್ ಸಿಂಗ್ ಹಾಕಿಕೊಂಡಿದ್ದ ಸುರಕ್ಷತಾ ಹಗ್ಗ ತುಂಡಾಗಿ ಸುಮಾರು 100 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಉಪಗುತ್ತಿಗೆದಾರನ ವಿರುದ್ಧ ಐಪಿಸಿ ಅಡಿಯಲ್ಲಿ ಪ್ರಕರಣವನ್ನು ಪಡುಬಿದ್ರಿ ಪೊಲೀಸರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

SCROLL FOR NEXT