ಸಂಗ್ರಹ ಚಿತ್ರ 
ರಾಜ್ಯ

ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಾಟ: ಇಬ್ಬರ ಬಂಧನ

ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ಅರುಣ್, ವಿನೋದ್ ಬಂಧನಕ್ಕೊಳಗಾದ ಯುವಕರಾಗಿದ್ದಾರೆ. ಬಂಧನದ ಬಳಿಕ ವಿಶೇಷ ಜಾಮೀನಿನ ಮೇಲೆ ಇಬ್ಬರೂ ಬಿಡುಗಡೆಯಾಗಿದ್ದಾರೆ.

ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋಣ್ ಹಾರಿಸುವುದಕ್ಕೆ ನಿರ್ಬಂಧಿಸಿರುವ ವಿಚಾರ ತಿಳಿಯದೆ ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಡಿಯೋ ಚಿತ್ರೀಕರಣಕ್ಕೆ ಈ ಇಬ್ಬರು ಯುವಕರು ವಿಧಾನಸೌಧದ ಬಳಿ ಬಂದಿದ್ದರು.

ಇದರಂತೆ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಡ್ರೋಣ್ ಹಾರಿಸಿದ್ದರು, ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರಂತೆ ಇಬ್ಬರನ್ನು ಬಂಧನಕ್ಕೊಳಪಡಿಸಿ, ಡ್ರೋಣ್ ನ್ನು ವಶಕ್ಕೆ ಪಡೆದುಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT