ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ 
ರಾಜ್ಯ

ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕ

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಕುಂದಾಪುರದ ಡಿವೈಎಸ್‌ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ ಎಂದು ಉಡುಪಿ ಎಸ್‌ಪಿ ಅಕ್ಷಯ್‌ ಹಾಕೇ ಮಚ್ಚಿಂದ್ರ ಅವರು ತಿಳಿಸಿದ್ದಾರೆ.

ತನಿಖಾಧಿಕಾರಿಯನ್ನು ಬದಲು ಮಾಡುವಂತೆ ಎಬಿವಿಪಿ, ಬಿಜೆಪಿ ಆಗ್ರಹಿಸಿದ್ದವು. ಅಲ್ಲದೆ, ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಅಲ್ಲದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ  ಎಸ್'ಪಿ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT