ಕಾಫಿ ತೋಟ ಜಲಾವೃತಗೊಂಡಿರುವ ದೃಶ್ಯ. (ಬಲ) ಕಾಫಿ ಬೀಜಗಳು ಉದುರಿಹೋಗಿರುವ ದೃಶ್ಯ. 
ರಾಜ್ಯ

ಮಡಿಕೇರಿಯ ಕಾಫಿ ಎಸ್ಟೇಟ್‌ಗಳಲ್ಲಿ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ: ರೈತ ಸಂಘ ಆಗ್ರಹ

ಮಡಿಕೇರಿ ಜಿಲ್ಲೆಯಾದ್ಯಂತ ಕೂಡಲೇ ಬೆಳೆ ಹಾನಿ ಸಮೀಕ್ಷೆ ಆರಂಭಿಸುವಂತೆ ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ರೈತ ಸಂಘ ಕಾಫಿ ಮಂಡಳಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. 

ಮಡಿಕೇರಿ: ಮಡಿಕೇರಿ ಜಿಲ್ಲೆಯಾದ್ಯಂತ ಕೂಡಲೇ ಬೆಳೆ ಹಾನಿ ಸಮೀಕ್ಷೆ ಆರಂಭಿಸುವಂತೆ ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ರೈತ ಸಂಘ ಕಾಫಿ ಮಂಡಳಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರೈತ ಸಂಘ ಮನವಿ ಪತ್ರ ಸಲ್ಲಿಸಿದ್ದು, ಶೀಘ್ರವೇ ಸರ್ವೆ ಆದೇಶ ಬರುವ ಸಾಧ್ಯತೆ ಇದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಆದಾಗ್ಯೂ, ಕರ್ನಾಟಕ ರಾಜ್ಯ ರೈತ ಸಂಘ ನಡೆಸಿದ ಪ್ರಾಥಮಿಕ ಬೆಳೆ ಹಾನಿ ಸಮೀಕ್ಷೆಯು ಶೇ. 50ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವುದನ್ನು ಸೂಚಿಸುತ್ತದೆ. ಎರಡು ವಾರಗಳಲ್ಲಿ ಸುರಿದ ಭಾರೀ ಮಳೆ ಮತ್ತು ನಿರಂತರ ಮಳೆಯಿಂದ ಕಾಫಿ ಎಸ್ಟೇಟ್‌ಗಳಲ್ಲಿ ಅಪಾರ ಬೆಳೆ ಹಾನಿಯಾಗಿದೆ.

''ರೈತ ಸಂಘವು ಪ್ರತಿ ಹೋಬಳಿ ಮತ್ತು ಜಿಲ್ಲೆಯ ಎಲ್ಲಾ ಐದು ತಾಲೂಕುಗಳಲ್ಲಿ ರೈತರನ್ನು ಹೊಂದಿದೆ. ಮಳೆಯಿಂದ ಆಗಿರುವ ಬೆಳೆ ಹಾನಿ ಕುರಿತು ರೈತರಿಂದ ವರದಿ ಕೇಳಿದ್ದು, ತಾಲೂಕಿನಾದ್ಯಂತ 130ಕ್ಕೂ ಹೆಚ್ಚು ಬೆಳೆಗಾರರಿಂದ ವರದಿ ಪಡೆದಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮನು ಸೋಮಯ್ಯ ಅವರು ಹೇಳಿದ್ದಾರೆ.

ಬೆಳೆಗಾರರು ಪ್ರತಿ ಹೋಬಳಿಯಿಂದ ಬೆಳೆ ಹಾನಿಯ ಫೋಟೋಗಳನ್ನು ಕಳುಹಿಸಿದ್ದಾರೆ ಮತ್ತು ಪ್ರಾಥಮಿಕ ಸಮೀಕ್ಷೆಯಲ್ಲಿ ಶೇ. 50 ರಷ್ಟು ಬೆಳೆ ಹಾನಿಯಾಗಿದೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT