ಬೈಕ್ ಜಾಥಾ ಚಾಲನೆ ಸಮಾರಂಭದ ಚಿತ್ರ 
ರಾಜ್ಯ

ಬೆಂಗಳೂರು: ''ರೈಡ್ ವಿಥ್ ಸೋಲ್ಡರ್ಸ್'' ಹುತಾತ್ಮ ವೀರ ಯೋಧರ ಗೌರವಾರ್ಥ ಬೃಹತ್ ಬೈಕ್ ಜಾಥಾ!

ಕಾರ್ಗಿಲ್ ವಿಜಯ್‌ ದಿನದ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘ, ಕಾರ್ಗಿಲ್‌ ವೀರ ಯೋಧರು, ಸಂಚಾರಿ ಪೊಲೀಸರ ತಂಡ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ  “ರೈಡ್‌ ವಿಥ್‌ ಸೋಲ್ಡರ್ಸ್” ಬೈಕ್‌ ಜಾಥಾ ಆಯೋಜಿಸಲಾಗಿತ್ತು.

ಬೆಂಗಳೂರು: ಕಾರ್ಗಿಲ್ ವಿಜಯ್‌ ದಿನದ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘ, ಕಾರ್ಗಿಲ್‌ ವೀರ ಯೋಧರು, ಸಂಚಾರಿ ಪೊಲೀಸರ ತಂಡ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ  “ರೈಡ್‌ ವಿಥ್‌ ಸೋಲ್ಡರ್ಸ್” ಬೈಕ್‌ ಜಾಥಾ ಆಯೋಜಿಸಲಾಗಿತ್ತು.

ಎಂ.ಜಿ. ರಸ್ತೆಯ ಮಾಣಿಕ್‌ ಶಾ ಪರೇಡ್‌ ಮೈದಾನದಿಂದ ವಿಜಯನಗರದ ಬಿಜಿಎಸ್‌ ಕ್ರೀಡಾಂಗಣದವರೆಗೆ ಸುಮಾರು 12 ಕಿಲೋಮೀಟರ್‌  ದೂರ ಒಂದು ಸಾವಿರ ಅಡಿ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ಜಾಥಾ ಸಾಗಿತು. ಶಾಸಕ ಸಿ ಕೆ . ರಾಮಮೂರ್ತಿ, ಮಾಜಿ ಯೋಧರ ಸಂಘದ ಅಧ್ಯಕ್ಷ ಶಿವಣ್ಣ,  ಮತ್ತಿತರ ಗಣ್ಯರು ಭಾಗವಹಿಸಿದ್ದರು. ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿ ಬಾಂಬ್‌ ದಾಳಿಯಿಂದ ಬದುಕುಳಿದು ಬಂದ ಕಾರ್ಗಿಲ್ ಯೋಧ ನವೀನ್‌ ನಾಗಪ್ಪ ಪಾಲ್ಗೊಂಡು ದೇಶಾಭಿಮಾನ ಉಕ್ಕಿಸಿದರು.

ಕಾರ್ಗಿಲ್‌ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ವೀರ ಯೋಧರನ್ನು ಸ್ಮರಿಸಿ, ಹುತಾತ್ಮರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಜಾಥಾ ಆಯೋಜಿಸಲಾಗಿತ್ತು. ಮಹಿಳಾ ಬೈಕರ್ಸ್‌ ಗಳು, ಸಂಚಾರಿ ಪೊಲೀಸರು, ಬಿ.ಎಸ್.ಎಫ್‌ ಯೋಧರು, 300 ಮಂದಿ ಮಾಜಿ ಯೋಧರು, ನೂರಾರು ವೀರ ನಾರಿಯರು ಬೈಕ್‌ ಗಳ ಮೂಲಕ ಸೇನಾ ಪಡೆಗೆ ಗೌರವ ಸಲ್ಲಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT